7:54 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

Chikkamagaluru | ವಿವಿಧ ಚರ್ಚುಗಳಲ್ಲಿ ಮಾತೆ ಮರಿಯಮ್ಮನವರ ಹಬ್ಬಕ್ಕೆ ನೋವೆನಾ ಪ್ರಾರ್ಥನೆ

04/09/2025, 12:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸೆಪ್ಟೆಂಬರ್ 8ರಂದು ನಡೆಯಲಿರುವ ಮಾತೆ ಮರಿಯಮ್ಮನವರ ಹಬ್ಬ(ಹೊಸಕ್ಕಿ ಹಬ್ಬ)ಕ್ಕೆ ಮೂಡಿಗೆರೆ ತಾಲ್ಲೂಕಿನಾದ್ಯಂತ ವಿವಿಧ ಚರ್ಚುಗಳು ಒಂಬತ್ತು ದಿನಗಳ ನೊವೇನಾ ಪ್ರಾರ್ಥನೆ ಆರಂಭವಾಗಿದೆ. ಮೂಡಿಗೆರೆ ಸಂತ ಅಂತೋಣಿ ಚರ್ಚ್ ಸೇರಿದಂತೆ ಗೋಣಿಬೀಡಿನ ಕಸ್ಕೇಬೈಲ್,ಬಸ್ಕಲ್,ಬಣಕಲ್,ಕೊಟ್ಟಿಗೆಹಾರ,ಬಾಳೂರು,ಜಾವಳಿ,ಕೆಳಗೂರು, ಹಿರೇಬೈಲ್, ಕೂವೆ ಸೇರಿದಂತೆ ಹಲವೆಡೆ ಬಾಲಿಕ ಮರಿಯ ಪ್ರತಿಮೆಗೆ ಹೂ ಅರ್ಪಣೆ ಮಾಡಿ ವಿಶೇಷ ಪ್ರಾರ್ಥನೆ ಮಾಡುವ ಮೂಲಕ ಶೃದ್ಧಾಭಕ್ತಿ ಅರ್ಪಿಸಲಾಗುತ್ತಿದೆ.ಆಗಸ್ಟ್ 30ರಿಂದಲೇ ಒಂಬತ್ತು ದಿನಗಳ ಕಾಲ ಮರಿಯಮ್ಮನವರ ಜಯಂತಿ ಅಂಗವಾಗಿ ಈ ವಿಶೇಷ ನೊವೇನಾ ಆರಂಭಿಸಲಾಗಿದ್ದು ಹಬ್ಬದ ಪರವಾಗಿ ರಸಪ್ರಶ್ನೆಗಳು ಸೇರಿದಂತೆ ವಿವಿಧ ಸ್ಪರ್ಧೆ ಏರ್ಪಡಿಸಿ ಹಬ್ಬದಂದು ಬಹುಮಾನ ನೀಡಲಾಗುತ್ತದೆ ಎಂದು ಕೊಟ್ಟಿಗೆಹಾರ ಸೆಕ್ರೆಡ್ ಹಾರ್ಟ್ ಚರ್ಚಿನ ಧರ್ಮಗುರು ರೆ.ಫಾ.ವಿಲಿಯಂ ಬರ್ನಾರ್ಡ್ ತಿಳಿಸಿದ್ದಾರೆ.
ವಿವಿಧ ಚರ್ಚುಗಳಲ್ಲಿ ಮಕ್ಕಳು ಸೇರಿದಂತೆ ಕ್ರೈಸ್ತ ಭಕ್ತಾದಿಗಳು ಹೆಚ್ಚಾಗಿ ಸಮಾವೇಶಗೊಂಡು ತಟ್ಟೆಯಲ್ಲಿ ವಿವಿಧ ಹೂಗಳನ್ನು ತಂದು ಬಾಲಿಕ ಮರಿಯಗೆ ಅರ್ಪಿಸಿ ನೋವೆನಾ ಪ್ರಾರ್ಥನೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು