9:24 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

04/09/2025, 19:51

ಬೆಂಗಳೂರು(reporterkarnataka.com): ಕೆಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು.


ನಂತರದ ಮಾತನಾಡಿದ ಅವರು ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದರು.
ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದು ಅವರು ತಿಳಿಸಿದರು.

*ಸಂಸ್ಕರಿಸಿದ ನೀರು ಬೆಳೆಗಳಿಗೆ ಯೋಗ್ಯವಲ್ಲ ಎನ್ನುವುದು ಅಪಪ್ರಚಾರ: ಇದರಲ್ಲಿ ಸತ್ಯಾಂಶವಿಲ್ಲ*
ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುವುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್‌ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಿದೆ.
ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, 446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು