2:36 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಜಿಎಸ್‌ಟಿ ಸರಳೀಕರಣ | ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ ಕಾಮತ್

04/09/2025, 20:12

ಮಂಗಳೂರು(reporterkarnataka.com): ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅಮೆರಿಕಾದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದು ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ, ಆರೋಗ್ಯ, ರಕ್ಷಣಾ, ಕೃಷಿ, ಆಟೋಮೊಬೈಲ್, ಎಲೆಕ್ಟ್ರಾನಿಕ್, ಹೀಗೆ ಜನಸಾಮಾನ್ಯರ ಬದುಕಿಗೆ ಅಗತ್ಯವಿರುವ ಎಲ್ಲಾ ವಸ್ತುಗಳ ತೆರಿಗೆ ಗಣನೀಯವಾಗಿ ಇಳಿಕೆಯಾಗಲಿದೆ. ಆ ಮೂಲಕ ರೈತರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು, ಉದ್ಯಮಿಗಳು, ಹೀಗೆ ಪ್ರತಿಯೊಂದು ವಲಯಕ್ಕೂ ಈ ಸುಧಾರಣೆಗಳು ತಲುಪಲಿದ್ದು ಜನತೆಯ ಜೀವನ ಮಟ್ಟ ಇನ್ನಷ್ಟು ಸುಧಾರಣೆಯಾಗಲಿದೆ ಎಂದರು.
ಒಂದೆಡೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲದರ ಬೆಲೆ ಹೆಚ್ಚಿಸಿ ಜನರ ಬದುಕನ್ನು ದುಸ್ತರಗೊಳಿಸುತ್ತಿರುವ ಈ ಸಂದರ್ಭದಲ್ಲಿ ಜನಸಾಮಾನ್ಯರಿಗೆ ತೆರಿಗೆ ಭಾರ ಹೆಚ್ಚಿಸುವುದಲ್ಲ, ಇಳಿಸುವುದಕ್ಕೆ ನಮ್ಮ ಆದ್ಯತೆ ಎಂದು ಶೇ.12 ಮತ್ತು ಶೇ.28ರ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ ಶೇ.5 ಮತ್ತು ಶೇ.18 ಸ್ಲ್ಯಾಬ್‌ಗೆ ಮಾತ್ರ ಅನುಮೋದನೆ ನೀಡಿದ್ದು ದೇಶದ ಪಾಲಿಗೆ ದಸರಾ ಹಾಗೂ ದೀಪಾವಳಿ ಉಡುಗೊರೆಯಾಗಿದೆ. ಆ ಕಾರಣಕ್ಕಾಗಿ ಮೋದೀಜಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ನಾಡಿನ ಜನತೆಯ ಪರವಾಗಿ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು