2:31 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5 ಕೋಟಿ ಮೌಲ್ಯದ ಜಾಗ ದಾನ

05/09/2025, 12:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಕೊಡಗಿನ ಗೌಡ ಜನಾಂಗಕ್ಕೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ವಿರಾಜಪೇಟೆ ಯಲ್ಲಿ ಸುಸಜ್ಜಿತ ಸಮಾಜದ ಕಟ್ಟಡ ಕಟ್ಟುವ ಅವಶ್ಯಕತೆಯಿದೆ ಎಂದು ದಿವಂಗತ ಕುರುಂಜಿ ವೆಂಕಟರಮಣ ಗೌಡರವರು 2004 ನೇ ಇಸವಿಯಲ್ಲಿ 77 ಸೆಂಟ್ ಜಾಗವನ್ನು 22 ಲಕ್ಷ ಹಣ ನೀಡಿ ಅವರ ಮಕ್ಕಳಾದ ಡಾ. ಕೆ ವಿ. ಚಿದಾನಂದ ಮತ್ತು ಡಾ ಕೆ ವಿ ರೇಣುಕಾ ಪ್ರಸಾದ್ ರವರ ಹೆಸರಿನಲ್ಲಿ ಖರೀದಿಸಿದ್ದ ಜಾಗ ಹಲವು ಕಾರಣಗಳಿಂದ 21 ವರ್ಷ ಗಳಿಂದ ವರ್ಗಾವಣೆ ಆಗದೇ ಇದ್ದ ಜಾಗವನ್ನು ಬಳಿಕ ತದ ನಂತರದಲ್ಲಿ ಅವರು ಆ ಜಾಗವನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟದ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ಏಪ್ರಿಲ್ 18 ರ ಪ್ರಥಮ ಸಭೆಯಲ್ಲಿಯೇ ಈ ಕೆಲಸ ಕೈಗೆತ್ತಿಕೊಳ್ಳುವ ದೃಢ ತೀರ್ಮಾನ ಮಾಡಿಕೊಳ್ಳಲಾಯಿತು.
ಸತತ 4 ತಿಂಗಳು ದಾನಿಗಳ ಸಂಪರ್ಕದಲ್ಲಿದ್ದು ಹಲವಾರು ಸುತ್ತಿನ ಮಾತುಕತೆಗಳ ನಂತರ ಡಾ. ಕೆ ವಿ. ಚಿದಾನಂದ ಅವರ ಮನವೊಲಿಸಿ 5-6 ಬಾರಿಯ ಕರಡು ತಿದ್ದುಪಡಿಯ ನಂತರ ಡಾ ಕೆ. ವಿ. ಚಿದಾನಂದ ರವರ ಪರವಾಗಿ ಅವರ ಮಗ ಕೆ. ಸಿ. ಅಕ್ಷಯ್ ಹಾಗೇ ಡಾ ಕೆ. ವಿ. ರೇಣುಕಾ ಪ್ರಸಾದ್ ರವರ ಪರವಾಗಿ ಅವರ ಮಗ ಕೆ.ಆರ್. ಮೌರ್ಯರವರು ಮಡಿಕೇರಿ ಉಪ ನೋಂದಾವಣೆ ಕಚೇರಿಗೆ ಹಾಜರಾಗಿ ಇಂದಿಗೆ ಅಂದಾಜು 3.5 ಕೋಟಿ ಬೆಲೆಬಾಳುವ ಜಾಗವನ್ನು ವಿರಾಜಪೇಟೆ ಸಮಾಜಕ್ಕೆ ಅದರ ಅದ್ಯಕ್ಷರಾದ ಮುಕ್ಕಾಟಿ ವಾಸು ಗಣಪತಿ ಅವರ ಹೆಸರಿಗೆ ಜಾಗದ ದಾನಪತ್ರ ಬರೆಸಿ ಹಸ್ತಾಂತರ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು