11:08 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಹಸಿ ಕಸ, ಒಣ ಕಸ ಮನೆ ಮನೆಗಳಲ್ಲೇ ವಿಂಗಡಿಸಿ: ತ್ಯಾಜ್ಯ ಸಂಗ್ರಹಕರು ನಮ್ಮ ನಿಮ್ಮ ಹಾಗೆ ಅವರು ಕೂಡ ಮನುಷ್ಯರೇ

23/05/2021, 09:35

ಅನುಷ್ ಪಂಡಿತ್ ಮಂಗಳೂರು

ifo.reporterkarnataka@gmail.com

ಮಂಗಳೂರು ಮಹಾನಗರಪಾಲಿಕೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಮನೆಗಳು ಹಾಗೂ ವಾಣಿಜ್ಯ ಚಟುವಟಿಕೆಯವರ ಹಸಿ ಕಸ ಮತ್ತು ಒಣ ಕಸ ಮೂಲದಲ್ಲೇ ವಿಂಗಡಿಸಿ ಕೊಡಲು ಆದೇಶ ನೀಡಿದೆ. ಈ ಹಿಂದೆಯೂ ಇಂತಹ ಆದೇಶ ನೀಡಿ ಇನ್ನೇನು ಪೂರ್ಣ ಪ್ರಮಾಣದಲ್ಲಿ ಜಾರಿಯಾಗುತ್ತೇ ಎನ್ನುವಷ್ಟರಲ್ಲಿ ಅದನ್ನು ಕೈಬಿಟ್ಟಿತ್ತು. ಆದರೆ ಇದೀಗ ಮತ್ತೆ ಜಾರಿಗೆ ತಂದಿರುವುದು ಸ್ವಾಗತಾರ್ಹ. 

‘ಕೊಂಡೋಗುವವರಿದ್ದರೆ ಹೇಗೂ ಕೊಟ್ಟರಾಗುತ್ತದೆ’ ಎನ್ನುವುದು ಹೆಚ್ಚಿನವರ ಮನಸ್ಥಿತಿ. ಹಸಿ ಕಸದ ಜತೆಗೆ ಒಡೆದ ಗ್ಲಾಸ್, ಬಾಟಲಿ, ಸಿರಂಜಿ ಹಾಗೂ ಕೊಡಬಾರದ ವಸ್ತುಗಳನ್ನು ತೊಟ್ಟೆಯಲ್ಲಿ ಕಟ್ಟಿ ಕೊಡುತ್ತಿದ್ದರು. ಆದರೆ ಪಚ್ಚನಾಡಿ ಡಪ್ಪಿಂಗ್ ಯಾರ್ಡ್ ನಲ್ಲಿ ಮೂರು ನಾಲ್ಕು ವರ್ಷಗಳ ಹಿಂದೆ ನಡೆದ ಭೀಕರ ತ್ಯಾಜ್ಯ ದುರಂತದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಪಾಲಿಕೆಗೆ ಚಾಟಿ ಬೀಸಿತ್ತು.ಇದರಿಂದ ಎಚ್ಚೆತ್ತುಕೊಂಡಿರುವ ಪಾಲಿಕೆ ಇದೀಗ ಒಂದು ನಿರ್ಧಾರಕ್ಕೆ ಬಂದಿದೆ. ಅದೇನೆಂದರೆ ಹಸಿಕಸ ಮತ್ತು ಒಣ ಕಸವನ್ನು ಮೂಲದಲ್ಲೇ ಬೇರ್ಪಡಿಸುವುದು ಕಡ್ಡಾಯ ಎನ್ನುವುದು. ವಾರದ ಎಲ್ಲ ದಿನಗಳಲ್ಲಿ ಹಸಿ ಕಸವನ್ನು ಪಾಲಿಕೆಯ ತ್ಯಾಜ್ಯ ಸಂಗ್ರಹಕರು ಒಯ್ಯುತ್ತಾರೆ. ಒಣಕಸವನ್ನು ಪ್ರತಿ ಶುಕ್ರವಾರ ಕೊಂಡೋಗುತ್ತಾರೆ.


ಇದೆಲ್ಲ ನಿಜಕ್ಕೂ ಒಳ್ಳೆಯ ಕ್ರಮವೇ. ಆದರೆ ಈಗ ಸಮಸ್ಯೆ ಏನೆಂದರೆ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ 2-3 ದಿನಗಳಿಗೊಮ್ಮೆ ತ್ಯಾಜ್ಯ ಸಂಗ್ರಹಿಸಲಾಗುತ್ತದೆ. ಓಪನ್ ಬಕೆಟ್ ನಲ್ಲಿ ಇಟ್ಟಿರುವ ಹಸಿ ಕಸ ಕೊಳೆತು ವಾಸನೆ ಬರಲಾರಂಭಿಸುತ್ತದೆ. ಜತೆಗೆ ವಿಪರೀತ ಸೊಳ್ಳೆ ಕಾಟ ಶುರುವಾಗುತ್ತದೆ. ಕೊರೊನಾ ಜತೆಗೆ ಇಲ್ಲಿ ಮಲೇರಿಯಾ ಮತ್ತು ಡೆಂಗ್ಯು ಜ್ವರದ ವಿಪರೀತ ಕಾಟವಿದೆ. ಈ ಹಿನ್ನೆಲೆಯಲ್ಲಿ ಸರಿಯಾದ ಪ್ರಮಾಣದಲ್ಲಿ ಎಲ್ಲ ಪ್ರದೇಶಗಳಿಗೂ ಪೌರಕಾರ್ಮಿಕರು/ತ್ಯಾಜ್ಯ ಸಂಗ್ರಹಕರು ಹೋಗುವ ವ್ಯವಸ್ಥೆಯನ್ನು ಪಾಲಿಕೆಯ ಆರೋಗ್ಯ ಇಲಾಖೆ ಮಾಡಬೇಕು. ಹಾಗೆ ಪೌರ ಕಾರ್ಮಿಕರಿಗೆ ಮಾಸ್ಕ್, ಗ್ಲೌಸ್, ಬೂಟು ಹಾಗೂ ಲಸಿಕೆ ಸೇರಿದಂತೆ


ಸುರಕ್ಷತೆಯ ಎಲ್ಲ ಕ್ರಮಗಳನ್ನು ಒದಗಿಸುವ ವ್ಯವಸ್ಥೆಯನ್ನು ಪಾಲಿಕೆ ಮಾಡಬೇಕು. ಹಾಗೆ ಖಾಯಂ ಪೌರ ಕಾರ್ಮಿಕರನ್ನು ಹಾಗೂ ಹೊರಗುತ್ತಿಗೆಯಲ್ಲಿ ದುಡಿಯುವ ತ್ಯಾಜ್ಯ ಸಂಗ್ರಹಕರಾದ ಪೌರ ಕಾರ್ಮಿಕರನ್ನು ಪಾಲಿಕೆ ಆಡಳಿತ ಹಾಗೂ ಸಾರ್ವಜನಿಕರು ಗೌರವದಿಂದ ಕಾಣುವುದು ಇಂದಿನ ಅಗತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು