6:01 AM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಮತ್ತು ಕಾರು ಡಿಕ್ಕಿ

05/09/2025, 21:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಬೇರೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಸಡನ್ ಆಗಿ ಬ್ರೇಕ್ ಹಾಕಿದಕ್ಕೆ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಅಡ್ಡವಾಗಿ ತಿರುಗಿ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಅಪ್ಪಳಿಸಿರುವ ಮತ್ತು ಅದೇ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿರುವ ಘಟನೆ ವರದಿಯಾಗಿದೆ.


ಇಂದು ಮಧ್ಯಾಹ್ನ ಕೊಡಗರಹಳ್ಳಿ ಸಮೀಪದ ಮಾರುತಿ ನಗರದಲ್ಲಿ ಈ ಸರಣಿ ಅಪಘಾತ ಸಂಭವಿಸಿದೆ.
ಕೂಡಿಗೆಯ ಆನಿ ಎಂಬುವವರ ಟ್ರ್ಯಾಕ್ಟರ್ ಅನ್ನು ಇಂದು ಮಧ್ಯಾಹ್ನ ರೇವಣ್ಣ ಎಂಬುವವರು ಕೆದಕಲ್ ನಿಂದ ಕೂಡಿಗೆಗೆ ಚಲಾಯಿಸಿಕೊಂಡು ಹೋಗುತ್ತಿದ್ದರು. ಮಾರ್ಗಮಧ್ಯದ ಮಾರುತಿ ನಗರದ ತಿರುವಿನಲ್ಲಿ ವಾಹನವೊಂದಕ್ಕೆ ಸೈಡ್ ಕೊಡಲೆಂದು ಟ್ರ್ಯಾಕ್ಟರ್ ಚಾಲಕ ಸಡನ್ ಆಗಿ ಬ್ರೇಕ್ ಹಾಕಿದ್ದಾನೆ ಎಂದು ಹೇಳಲಾಗಿದೆ. ಇದರಿಂದಾಗಿ ನಿಯಂತ್ರಣ ಕಳೆದುಕೊಂಡ ಟ್ರಾಕ್ಟರ್ ನ ಇಂಜಿನ್ ಭಾಗ ರಸ್ತೆಯ ಬಲಭಾಗಕ್ಕೆ ಅಡ್ಡವಾಗಿ ತಿರುಗಿ ನಿಂತುಕೊಂಡಿದೆ. ಇದೇ ಸಂದರ್ಭ ಕುಶಾಲನಗರ ಕಡೆಯಿಂದ ಮಡಿಕೇರಿಗೆ ಜೆಲ್ಲಿ ಕಲ್ಲು ತುಂಬಿಸಿಕೊಂಡು ಬರುತ್ತಿದ್ದ ಟಿಪ್ಪರ್ ಟ್ರಾಕ್ಟರ್ ನ ಇಂಜಿನ್ ಗೆ ಅಪ್ಪಳಿಸಿದೆ ಅಲ್ಲದೇ ಟ್ರಾಕ್ಟರ್ ನ ಹಿಂದೆ ಬರುತ್ತಿದ್ದ ಕಾರುವೊಂದು ಟ್ರಾಕ್ಟರ್ ಗೆ ಅಲ್ಪ ಪ್ರಮಾಣದಲ್ಲಿ ಗುದ್ದಿದೆ. ಟಿಪ್ಪರ್ ಅಪ್ಪಳಿಸಿದ ರಭಸಕ್ಕೆ ಟ್ರಾಕ್ಟರ್ ನ ಮುಂಭಾಗದ ಟಯರ್ ಕಿತ್ತು ಬಂದು ನಜ್ಜುಗುಜ್ಜುಗೊಂಡಿದೆ. ಟ್ರ್ಯಾಕ್ಟರ್ ಗೆ ಗುದ್ದಿದ ನಂತರ ಟಿಪ್ಪರ್ ರಸ್ತೆಬದಿಯ ಅಂಚಿನೊಳಗೆ ನುಸುಳಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಬೇಟಿ ನೀಡಿದ ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು