9:43 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Bantwal | ಕಲ್ಲಡ್ಕ ಶಾರದೋತ್ಸವ: ವಿದುಷಿ ವಿದ್ಯಾ ಮನೋಜ್ ‘ಶಾಂತಶ್ರೀ’ ಪ್ರಶಸ್ತಿ; ವಿಜಯದಶಮಿ ದಿನ ಶೋಭಾಯಾತ್ರೆ

06/09/2025, 19:45

ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ ಕಲ್ಲಡ್ಕದಲ್ಲಿ ನಡೆಯುವ ೪೮ನೇ ವರ್ಷದ ಶಾರದೋತ್ಸವವು ಸೆ.೨೮ ರಿಂದ ಅ.೨ ರವರೆಗೆ ಐದು ದಿನಗಳ ಕಾಲ ನಡೆಯಲಿದ್ದು, ಈ ವರ್ಷದ ಕಲ್ಲಡ್ಕ ಶಾರದೋತ್ಸವದ ‘ಶಾಂತಶ್ರೀ’ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಅವರು ಆಯ್ಕೆಯಾಗಿದ್ದರೆ.
೪೪ ವರ್ಷ ಶಬರಿಮಲೆ ಯಾತ್ರೆ ಕೈಗೊಂಡ ಶತಾಯುಷಿಗಳಾದ ಕಮಲ ಗುರುಸ್ವಾಮಿ ಕುಂಟಿಪಾಪು ಮತ್ತು ಸ್ವಉದ್ಯಮದಲ್ಲಿ ಸಾಧನೆಗೈದ ಸಾಧಕಿ ನಾಗರತ್ನ ಪೂರ್ಲಿಪಾಡಿ ಅವರು ‘ಗ್ರಾಮಗೌರವ’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸೆ.೨೮ ರಂದು ಕ್ರೀಡಾಕೂಟ ‘ಮಾರ್ನೆಮಿದ ಗೊಬ್ಬು’ ಶಿಶು, ಬಾಲ, ಪ್ರೌಢ, ತರುಣ, ಸಾರ್ವಜನಿಕ ಎಂಬ ಐದು ವಿಬಾಗಗಳಲ್ಲಿ ಜರಗಲಿದ್ದು, ಸೆ.೨೯ ರಂದು ವೇ.ಮೂ. ಪಳನೀರು ಶ್ರೀಪತಿ ಭಟ್ ಅವರ ಪೌರೋಹಿತ್ಯದಲ್ಲಿ ಶಾರದಾ ಮಾತೆಯ ಪ್ರತಿಷ್ಠಾಪನೆ ನೆರವೇರಲಿದೆ. ದುರ್ಗಾಹೋಮ, ಶಾರದೆಗೆ ರಂಗಪೂಜೆ, ಅಕ್ಷರಭ್ಯಾಸ, ಆಯುಧಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಗಣ್ಯರ ಭಾಗವಹಿಸುವಿಕೆಯಲ್ಲಿ ಧಾರ್ಮಿಕ ಸಭೆ, ಪ್ರಶಸ್ತಿ ಪ್ರಧಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ನೌಕಸೇನೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಭಿನಂದನೆ ಮಾಡಲಾಗುವುದು.
ಅಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಾಟಕ, ನೃತ್ಯರಂಜನಿ, ಗಾನ ನಾಟ್ಯ ಸಂಭ್ರಮ ನಡೆಯಲಿದೆ. ವಿಜಯದಶಮಿಯಂದು ಶೋಭಾಯಾತ್ರೆ ಯೊಂದಿಗೆ ಉತ್ಸವವು ಸಮಾಪನಗೊಳ್ಳಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು