12:37 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Bantwal | ಕಲ್ಲಡ್ಕ ಶಾರದೋತ್ಸವ: ವಿದುಷಿ ವಿದ್ಯಾ ಮನೋಜ್ ‘ಶಾಂತಶ್ರೀ’ ಪ್ರಶಸ್ತಿ; ವಿಜಯದಶಮಿ ದಿನ ಶೋಭಾಯಾತ್ರೆ

06/09/2025, 19:45

ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ ಕಲ್ಲಡ್ಕದಲ್ಲಿ ನಡೆಯುವ ೪೮ನೇ ವರ್ಷದ ಶಾರದೋತ್ಸವವು ಸೆ.೨೮ ರಿಂದ ಅ.೨ ರವರೆಗೆ ಐದು ದಿನಗಳ ಕಾಲ ನಡೆಯಲಿದ್ದು, ಈ ವರ್ಷದ ಕಲ್ಲಡ್ಕ ಶಾರದೋತ್ಸವದ ‘ಶಾಂತಶ್ರೀ’ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಅವರು ಆಯ್ಕೆಯಾಗಿದ್ದರೆ.
೪೪ ವರ್ಷ ಶಬರಿಮಲೆ ಯಾತ್ರೆ ಕೈಗೊಂಡ ಶತಾಯುಷಿಗಳಾದ ಕಮಲ ಗುರುಸ್ವಾಮಿ ಕುಂಟಿಪಾಪು ಮತ್ತು ಸ್ವಉದ್ಯಮದಲ್ಲಿ ಸಾಧನೆಗೈದ ಸಾಧಕಿ ನಾಗರತ್ನ ಪೂರ್ಲಿಪಾಡಿ ಅವರು ‘ಗ್ರಾಮಗೌರವ’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸೆ.೨೮ ರಂದು ಕ್ರೀಡಾಕೂಟ ‘ಮಾರ್ನೆಮಿದ ಗೊಬ್ಬು’ ಶಿಶು, ಬಾಲ, ಪ್ರೌಢ, ತರುಣ, ಸಾರ್ವಜನಿಕ ಎಂಬ ಐದು ವಿಬಾಗಗಳಲ್ಲಿ ಜರಗಲಿದ್ದು, ಸೆ.೨೯ ರಂದು ವೇ.ಮೂ. ಪಳನೀರು ಶ್ರೀಪತಿ ಭಟ್ ಅವರ ಪೌರೋಹಿತ್ಯದಲ್ಲಿ ಶಾರದಾ ಮಾತೆಯ ಪ್ರತಿಷ್ಠಾಪನೆ ನೆರವೇರಲಿದೆ. ದುರ್ಗಾಹೋಮ, ಶಾರದೆಗೆ ರಂಗಪೂಜೆ, ಅಕ್ಷರಭ್ಯಾಸ, ಆಯುಧಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಗಣ್ಯರ ಭಾಗವಹಿಸುವಿಕೆಯಲ್ಲಿ ಧಾರ್ಮಿಕ ಸಭೆ, ಪ್ರಶಸ್ತಿ ಪ್ರಧಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ನೌಕಸೇನೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಭಿನಂದನೆ ಮಾಡಲಾಗುವುದು.
ಅಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಾಟಕ, ನೃತ್ಯರಂಜನಿ, ಗಾನ ನಾಟ್ಯ ಸಂಭ್ರಮ ನಡೆಯಲಿದೆ. ವಿಜಯದಶಮಿಯಂದು ಶೋಭಾಯಾತ್ರೆ ಯೊಂದಿಗೆ ಉತ್ಸವವು ಸಮಾಪನಗೊಳ್ಳಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು