7:11 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

06/09/2025, 20:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಇತ್ತೀಚಿನ ದಿನಗಳಲ್ಲಿ ಕುಶಾಲನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶ್ರೀಗಂಧ ಮರಗಳ ಚೋರರ ಹಾವಳಿ ಹೆಚ್ಚಾಗಿದೆ. ಮರಗಳು ಇದ್ದಕ್ಕಿದ್ದ ಹಾಗೆ ಮಾಯವಾಗುತ್ತಿದೆ.
ಆಗಸ್ಟ್ 31ರಂದು ರಾತ್ರಿ ಗುಮ್ಮನ ಕೊಲ್ಲಿಯ ನಂದಿ ಬಡಾವಣೆಯಲ್ಲಿ ನಿವಾಸಿಯೊಬ್ಬರ ಮನೆಯ ಕಾಂಪೌಂಡನ್ನು ಒಡೆದು ಅಲ್ಲಿದ್ದ ಶ್ರೀಗಂಧದ ಮರವನ್ನು ಕಳ್ಳರು ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ..


ಕುಶಾಲನಗರ ಸುತ್ತ ಮುತ್ತಲಿನಲ್ಲಿರುವ ತೋಟ, ಹೊಲ, ಬೇಲಿಗಳಲ್ಲಿ ಬೆಳೆದಿರುವ ಶ್ರೀಗಂಧದ ಮರಗಳನ್ನು ಕತ್ತರಿಸಿ ಕಳ್ಳತನ ಮಾಡುತ್ತಿದ್ದಾರೆ. ಈ ಕಳ್ಳರ ದುರಾಸೆ ಎಷ್ಟಿದೆ ಅಂದರೆ, ತಿರುಳೇ, (ಚೇಗು) ಕಟ್ಟದ ಚಿಕ್ಕ ಚಿಕ್ಕ ಎಳೆಯ ಮರಗಳಿಗೆ ಗರಗಸ ಹಾಕಿ ಕತ್ತರಿಸಿ ಶ್ರೀಗಂಧವನ್ನು ಸರ್ವನಾಶ ಮಾಡುತ್ತಿದ್ದಾರೆ. ಯಾವುದೇ ರೀತಿಯ ಭಯ ಭೀತಿ ಇಲ್ಲದ ಇವರು, ಗಂಧದ ಮರಗಳು ಮುಗಿದ ಮೇಲೆ ಮುಂದಿನ ದಿನಗಳಲ್ಲಿ ಮನೆ ಮನೆಗಳಿಗೂ ಕನ್ನ ಹಾಕಲು ಹೇಸುವುದಿಲ್ಲ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಜಂಟಿ ಕಾರ್ಯಾಚರಣೆ ನಡೆಸಿ ಶ್ರೀಗಂಧ ಮರ ಚೋರರನ್ನು ಸದೆಬಡೆಯುವಂತೆ ಸಾರ್ವಜನಿಕ ವಲಯದಲ್ಲಿ ಒತ್ತಾಯ ಕೇಳಿಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು