12:27 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

06/09/2025, 20:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಇತ್ತೀಚಿನ ದಿನಗಳಲ್ಲಿ ಕುಶಾಲನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶ್ರೀಗಂಧ ಮರಗಳ ಚೋರರ ಹಾವಳಿ ಹೆಚ್ಚಾಗಿದೆ. ಮರಗಳು ಇದ್ದಕ್ಕಿದ್ದ ಹಾಗೆ ಮಾಯವಾಗುತ್ತಿದೆ.
ಆಗಸ್ಟ್ 31ರಂದು ರಾತ್ರಿ ಗುಮ್ಮನ ಕೊಲ್ಲಿಯ ನಂದಿ ಬಡಾವಣೆಯಲ್ಲಿ ನಿವಾಸಿಯೊಬ್ಬರ ಮನೆಯ ಕಾಂಪೌಂಡನ್ನು ಒಡೆದು ಅಲ್ಲಿದ್ದ ಶ್ರೀಗಂಧದ ಮರವನ್ನು ಕಳ್ಳರು ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ..


ಕುಶಾಲನಗರ ಸುತ್ತ ಮುತ್ತಲಿನಲ್ಲಿರುವ ತೋಟ, ಹೊಲ, ಬೇಲಿಗಳಲ್ಲಿ ಬೆಳೆದಿರುವ ಶ್ರೀಗಂಧದ ಮರಗಳನ್ನು ಕತ್ತರಿಸಿ ಕಳ್ಳತನ ಮಾಡುತ್ತಿದ್ದಾರೆ. ಈ ಕಳ್ಳರ ದುರಾಸೆ ಎಷ್ಟಿದೆ ಅಂದರೆ, ತಿರುಳೇ, (ಚೇಗು) ಕಟ್ಟದ ಚಿಕ್ಕ ಚಿಕ್ಕ ಎಳೆಯ ಮರಗಳಿಗೆ ಗರಗಸ ಹಾಕಿ ಕತ್ತರಿಸಿ ಶ್ರೀಗಂಧವನ್ನು ಸರ್ವನಾಶ ಮಾಡುತ್ತಿದ್ದಾರೆ. ಯಾವುದೇ ರೀತಿಯ ಭಯ ಭೀತಿ ಇಲ್ಲದ ಇವರು, ಗಂಧದ ಮರಗಳು ಮುಗಿದ ಮೇಲೆ ಮುಂದಿನ ದಿನಗಳಲ್ಲಿ ಮನೆ ಮನೆಗಳಿಗೂ ಕನ್ನ ಹಾಕಲು ಹೇಸುವುದಿಲ್ಲ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಜಂಟಿ ಕಾರ್ಯಾಚರಣೆ ನಡೆಸಿ ಶ್ರೀಗಂಧ ಮರ ಚೋರರನ್ನು ಸದೆಬಡೆಯುವಂತೆ ಸಾರ್ವಜನಿಕ ವಲಯದಲ್ಲಿ ಒತ್ತಾಯ ಕೇಳಿಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು