7:48 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ರೋಹನ್ ಸಿಟಿ ಕಚೇರಿಯಲ್ಲಿ ಓಣಂ ಹಬ್ಬದ ಸಂಭ್ರಮ: ಸಾಂಸ್ಕೃತಿಕ ವೈಭವ

07/09/2025, 20:27

ಮಂಗಳೂರು(reporterkarnataka.com): ನಗರದ ಪ್ರತಿಷ್ಠಿತ ರೋಹನ್ ಕಾರ್ಪೋರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿ ಕಚೇರಿಯಲ್ಲಿ ಒಣಂ ಹಬ್ಬವನ್ನು ಆಚರಿಸಲಾಯಿತು. ಸಿಬ್ಬಂದಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ವೈಭವವನ್ನು ಹಂಚಿಕೊಂಡರು.
ಕಾರ್ಯಕ್ರಮವು ದೀಪಪ್ರಜ್ವಲನದೊಂದಿಗೆ ಆರಂಭಗೊಂಡಿತು. ಸಂಸ್ಥೆಯ ನಿರ್ದೇಶಕ ಡಿಯೋನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಸುಮನಾ ಅವರು ದೀಪ ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು.

ಓಣಂ ಹಬ್ಬದ ಹೂವಿನ ಅಲಂಕಾರ ( ಪೂಕಳಂ ), ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳ ಸಕ್ರಿಯ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿರ್ದೇಶಕ ಡಿಯೋನ್ ಮೊಂತೆರೋ “ಒಣಂ ಹಬ್ಬವು ಏಕತೆ ಸಂಕೇತ. ಇಂತಹ ಆಚರಣೆಗಳು ನಮ್ಮ ಬಾಂಧವ್ಯವನ್ನು ಬಲಪಡಿಸುತ್ತವೆ” ಎಂದು ಹೇಳಿದರು.
“ಎಲ್ಲರೂ ಒಗ್ಗಟ್ಟಿನಿಂದ ಒಂದು ಕುಟುಂಬದಂತೆ ಹಬ್ಬವನ್ನು ಆಚರಿಸುತ್ತಿರುವುದು ಸಂತೋಷಕರ. ಇಂತಹ ಸಂದರ್ಭಗಳು ಪರಸ್ಪರ ಗೌರವ ಮತ್ತು ಸ್ನೇಹವನ್ನು ಹೆಚ್ಚಿಸುತ್ತವೆ” ಎಂದು ಜನರಲ್ ಮ್ಯಾನೇಜರ್ ಸುಮನಾ ಹೇಳಿದರು.
ರೋಹನ್ ಕಾರ್ಪೋರೇಶನ್ ವತಿಯಿಂದ ಹಮ್ಮಿಕೊಂಡಿದ್ದ ಈ ಒಣಂ ಆಚರಣೆಯು ಕೇವಲ ಹಬ್ಬದ ಆಚರಣೆ ಮಾತ್ರವಲ್ಲದೆ, ಸಂಸ್ಥೆಯ ಏಕತೆ ಮತ್ತು ಸೌಹಾರ್ದತೆಯ ಮೌಲ್ಯಗಳನ್ನು ಪುನರುಚ್ಚರಿಸಿದ ಸಂದರ್ಭವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು