4:21 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

08/09/2025, 17:36

ಕಾಸರಗೋಡು(reporterkarnataka.com): 25ರ ಮಾರ್ಚ್ 22 ನೇ ದಿನ ಪೋಲಿಸರಿಂದ ದೊರಕಿದ ಮಾಹಿತಿಯ ಮೇರೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಸ್ನೇಹಾಲಯದ ರಕ್ಷಣಾ ತಂಡವು ಪೂಜಾ ಮತ್ತು ಆಕೆಯ ಎಂಟು ತಿಂಗಳಿನ ಮಗು ಆಯುಷನನ್ನು ರಕ್ಷಿಸಿ ತಾಯಿ–ಮಗುವನ್ನು ಮಂಜೇಶ್ವರದ ಸ್ನೇಹಾಲಯ ಮನೋ ಸಾಮಾಜಿಕ ಪುನಶ್ಚೇತನ ಸಂಸ್ಥೆಯ ಮಹಿಳೆಯರ ವಿಭಾಗದಲ್ಲಿ ದಾಖಲಿಸಿದರು.
ದೊರೆತ ಮಾಹಿತಿಯ ಪ್ರಕಾರ ಪೂಜಾ ಓರ್ವ ಗೃಹಿಣಿಯಾಗಿದ್ದು, ಮಾನಸಿಕ ಅಸ್ವಸ್ಥತೆಯ ಕಾರಣದಿಂದ ಬಿಹಾರವನ್ನು ಬಿಟ್ಟು ಉದ್ಯೋಗಕ್ಕಾಗಿ ತಮಿಳುನಾಡಿಗೆ ಹೊರಟಿದ್ದರು. ಆದರೆ ದುರಾದೃಷ್ಟದಿಂದ ತಮ್ಮ ಕುಟುಂಬದೊಡನೆ ಸಂಪರ್ಕ ಕಳೆದುಕೊಂಡರು. ಅವರಿಂದ ಬೇರ್ಪಟ್ಟರು.


ಆದರೆ ಸ್ನೇಹಾಲಯದಲ್ಲಿ ಆವಳ ಜೀವನಕ್ಕೆ ಒಂದು ಹೊಸ ತಿರುವು ಬಂತು. ಸ್ನೇಹಾಲಯದಲ್ಲಿ ದೊರೆತ ಸಮಗ್ರ ಮಾನಸಿಕ ಶಾರೀರಿಕ ಚಿಕಿತ್ಸೆ, ಅತ್ತ್ಯುತ್ತಮ ಆರೈಕೆ ಮತ್ತು ಸಮಾಲೋಚನೆಗಳಿಂದ ಆಕೆಯು ತನ್ನ ಮಾನಸಿಕ ಆರೋಗ್ಯವನ್ನು ಪುನ ಪಡೆದುಕೊಂಡಳು.
ತದನಂತರ ಅವರ ಪುನರ್ಮಿಲನ ಪ್ರಕ್ರಿಯೆ ಪ್ರಾರಂಭವಾಯಿತು. ಶ್ರದ್ದಾ ಫೌಂಡೇಶನಿನ ಬಸವರಾಜ್ ಅವರ ನೇತೃತ್ವದಲ್ಲಿ ಪೂಜಾಳ ವಿಳಾಸವನ್ನು ಪತ್ತೆ ಹಚ್ಚುವ ಕಾರ್ಯ ನಡೆಯಿತು ಹಾಗೂ ದೂರದ ಬಿಹಾರದಲ್ಲಿ ವಾಸಿಸುತ್ತಿರುವ ಆಕೆಯ ಗಂಡ ಮತ್ತು ಪರಿವಾರವನ್ನು ಪತ್ತೆ ಹಚ್ಚಲಾಯಿತು.
ಸಪ್ಟಂಬರ್ 7 ರಂದು ಪೂಜಾಳ ಗಂಡ ಭೂಪಾಲಿ ಆಕೆಯನ್ನು ಕರೆದುಕೊಂಡು ಹೋಗಲು ಸ್ನೇಹಾಲಯಕ್ಕೆ ಆಗಮಿಸಿದರು. ಈ ದಿನ ಪೂಜಾಳ ಬಾಳಿನಲ್ಲಿ ಅತ್ಯಂತ ಸಂತೋಷದ ದಿನವಾಗಿದ್ದರೂ ಸ್ನೇಹಾಲಯದ ಸಿಬ್ಬಂದಿಗಳಿಗೆ ಕಣ್ಣಿನಲ್ಲಿ ನೀರು ತರಿಸುವಂತ ದಿನವಾಗಿತ್ತು. ಕಾರಣ ಆಯುಷ್ ತನ್ನ ನಿಷ್ಕಳಂಕ ನಗು ಮತ್ತು ತುಂಟತನದಿಂದ ಸ್ನೇಹಾಲಯದ ಸಿಬ್ಬಂದಿಗಳ ಹೃದಯವನ್ನು ಸೂರೆ ಮಾಡಿ ಎಲ್ಲರ ಕಣ್ಮಣಿಯಾಗಿದ್ದ. ಅವನ ತುಂಟ ನೋಟ ಮತ್ತು ನಗು–ಕಿಸುಗುಸಿಗಳು ಪ್ರತಿಯೊಂದು ದಿನವನ್ನೂ ಹರ್ಷದಾಯಕವನ್ನಾಗಿಮಾಡಿದವು. ಅಲ್ಲದೆ ಸ್ನೇಹಾಲಯದ ಪ್ರತಿಯೊಂದು ಸಿಬ್ಬಂದಿಗಳಿಂದ ಅವನಿಗೆ ತಂದೆ ತಾಯಿಯ ಪ್ರೀತಿ, ಮಮತೆ, ಕರುಣೆ ಮತ್ತು ಒಲವು ದೊರಕುತ್ತಿತ್ತು.
ಕುಟುಂಬದೊಂದಿಗೆ ಪುನರ್ಮಿಲನಗೊಳ್ಳುವ ಸಂತೋಷವು ಪೂಜಾ ಮತ್ತು ಆಕೆಯ ಮಗುವಿಗೆ ಆಶೆ ಭರವಸೆಯಿಂದ ತುಂಬಿದ್ದರೂ, ಅವರ ಬೀಳ್ಕೊಡುಗೆ ಸ್ನೇಹಾಲಯಕ್ಕೆ ತುಂಬಾ ದುಃಖವನ್ನು ಉಂಟು ಮಾಡಿತು. ಎಲ್ಲರ ಪ್ರೀತಿಯ ಕೇಂದ್ರವಾಗಿರುವ ಆಯುಷ್ ವಿದಾಯ ಹೇಳುವಾಗ ಅನೇಕರ ಕಣ್ಣುಗಳು ತೇವವಾದವು.
ನಿರಾಶೆಯಿಂದ ಆರಂಭವಾದ ಈ ಜೀವನಯಾತ್ರೆ, ನಿಧಾನವಾಗಿ ಧೈರ್ಯ, ಆರೈಕೆ ಮತ್ತು ಚೇತರಿಕೆಯ ಕಥೆಯಾಗಿ ಬದಲಾಯಿತು. ಇಂದು ತಾಯಿ–ಮಗ ತಮ್ಮ ಮನೆ ಕಡೆ ಪ್ರಯಾಣಿಸುತ್ತಿದ್ದರೂ, ಅವರ ನೆನಪುಗಳು ಸದಾ ಸ್ನೇಹಾಲಯ ಕುಟುಂಬದ ಹೃದಯದಲ್ಲಿ ಅಚ್ಚದೇ ಉಳಿದಿವೆ. ಸ್ನೇಹಾಲಯದ ಸಂಸ್ಥಾಪಕ ಮತ್ತು ಸಮಸ್ತ ಸಿಬ್ಬಂದಿವರ್ಗದ ಮನಗಳು ಭಾರವಾದರೂ ಸಂತೋಷ ಭರಿತ ಹೃದಯದಿಂದ ಪೂಜಾ ಮತ್ತು ಆಯುಷನಿಗೆ ಶುಭ ಕೋರಿತು.

ಇತ್ತೀಚಿನ ಸುದ್ದಿ

ಜಾಹೀರಾತು