1:05 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ನರಿಕೊಂಬು: ಬೆಂಕಿ ಆಕಸ್ಮಿಕಕ್ಕೆ ಮನೆ ಭಸ್ಮ; ಬೈಕ್ ಅಗ್ನಿಗಾಹುತಿ; 5 ಲಕ್ಷಕ್ಕೂ ಹೆಚ್ಚು ನಷ್ಟ

08/09/2025, 22:40

ಜಯಾನಂದ ಪೆರಾಜೆ ಬಂಟ್ವಾಳ

info.reporterkarnata@gmail.com

ನರಿಕೊಂಬು ಗ್ರಾಮ ಬೋರುಗುಡ್ಡೆ ಎಂಬಲ್ಲಿ ಬೆಂಕಿ ಆಕಸ್ಮಿಕಕ್ಕೆ ಮನೆಯೊಂದು ಸುಟ್ಟು ಹೋಗಿದ್ದು, ಮನೆ ಎದುರು ನಿಲ್ಲಿಸಿದ್ದ ಬೈಕ್ ಅಗ್ನಿಗೆ ಆಹುತಿಯಾಗಿದೆ.


ಉಷಾ ರಮೇಶ್ ಅವರ ಮನೆಯಲ್ಲಿ ಇಂದು ಮುಂಜಾನೆ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿ ಮನೆ ಹಿಂಬದಿ ಪೂರ್ಣ ಭಸ್ಮವಾಗಿದೆ. ಮನೆಯ ಎದುರು ಇದ್ದ ಬೈಕ್ ಬೆಂಕಿಯ ಬಿಸಿಯಿಂದ ಮೆಲ್ಟ್ ಆಗಿದೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿತ್ತು. ಅಷ್ಟರಲ್ಲಿ ಊರ ಮಂದಿ ನೀರು ಹಾಕಿ ಬೆಂಕಿ ಆರಿಸಿದ್ದರು. ಘಟನೆಯಲ್ಲಿ ಸುಮಾರು
5 ಲಕ್ಷ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.
ಕಂದಾಯ ಅಧಿಕಾರಿಗಳು, ಮಾಜಿ ಸಚಿವ ಬಿ. ರಮಾನಾಥ ರೈ ಸಹಿತ ಪ್ರಮುಖರು ಸ್ಥಳಕ್ಕೆ ಬಂದಿದ್ದರು.
ಮುಂಜಾನೆ ಪುರೋಹಿತ ಗಣೇಶ್ ಮಯ್ಯ ಅವರು ಪೂಜಾ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ದಟ್ಟ ಹೊಗೆ ಬೆಂಕಿಯನ್ನು ಕಂಡು ಹತ್ತಿರದ ಮನೆಯಲ್ಲಿ ಮಾಹಿತಿ ನೀಡಿದ್ದರು. ಅಷ್ಟರಲ್ಲಿ ಉಷಾ ಎದ್ದು ಹೊಗೆಯಿಂದ ಕೆಮ್ಮುತ್ತಾ ಹೊರಗೆ ಬಂದಿದ್ದರು.
ಅವರ ಪತಿ ಮೂರು ವರ್ಷಗಳ ಹಿಂದೆ ಹೃದಯಾಘಾತದಿಂದ ಮೃತರಾಗಿದ್ದರು.
ಮನೆಯಲ್ಲಿ ಪುತ್ರ ಮತ್ತು ಮೊಮ್ಮಗ ಇದ್ದರು. ಘಟನೆಗೆ ಸ್ಪಷ್ಟ ಕಾರಣ ತಿಳಿದಿಲ್ಲ. ಬಚ್ಚಲು ಮನೆ, ಹತ್ತಿರದ ಕೋಣೆಗಳ ವಿದ್ಯುತ್ ವಯರ್ ಬೆಂಕಿಯಿಂದ ಕರಕಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು