2:17 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನರಿಕೊಂಬು: ಬೆಂಕಿ ಆಕಸ್ಮಿಕಕ್ಕೆ ಮನೆ ಭಸ್ಮ; ಬೈಕ್ ಅಗ್ನಿಗಾಹುತಿ; 5 ಲಕ್ಷಕ್ಕೂ ಹೆಚ್ಚು ನಷ್ಟ

08/09/2025, 22:40

ಜಯಾನಂದ ಪೆರಾಜೆ ಬಂಟ್ವಾಳ

info.reporterkarnata@gmail.com

ನರಿಕೊಂಬು ಗ್ರಾಮ ಬೋರುಗುಡ್ಡೆ ಎಂಬಲ್ಲಿ ಬೆಂಕಿ ಆಕಸ್ಮಿಕಕ್ಕೆ ಮನೆಯೊಂದು ಸುಟ್ಟು ಹೋಗಿದ್ದು, ಮನೆ ಎದುರು ನಿಲ್ಲಿಸಿದ್ದ ಬೈಕ್ ಅಗ್ನಿಗೆ ಆಹುತಿಯಾಗಿದೆ.


ಉಷಾ ರಮೇಶ್ ಅವರ ಮನೆಯಲ್ಲಿ ಇಂದು ಮುಂಜಾನೆ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿ ಮನೆ ಹಿಂಬದಿ ಪೂರ್ಣ ಭಸ್ಮವಾಗಿದೆ. ಮನೆಯ ಎದುರು ಇದ್ದ ಬೈಕ್ ಬೆಂಕಿಯ ಬಿಸಿಯಿಂದ ಮೆಲ್ಟ್ ಆಗಿದೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿತ್ತು. ಅಷ್ಟರಲ್ಲಿ ಊರ ಮಂದಿ ನೀರು ಹಾಕಿ ಬೆಂಕಿ ಆರಿಸಿದ್ದರು. ಘಟನೆಯಲ್ಲಿ ಸುಮಾರು
5 ಲಕ್ಷ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.
ಕಂದಾಯ ಅಧಿಕಾರಿಗಳು, ಮಾಜಿ ಸಚಿವ ಬಿ. ರಮಾನಾಥ ರೈ ಸಹಿತ ಪ್ರಮುಖರು ಸ್ಥಳಕ್ಕೆ ಬಂದಿದ್ದರು.
ಮುಂಜಾನೆ ಪುರೋಹಿತ ಗಣೇಶ್ ಮಯ್ಯ ಅವರು ಪೂಜಾ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ದಟ್ಟ ಹೊಗೆ ಬೆಂಕಿಯನ್ನು ಕಂಡು ಹತ್ತಿರದ ಮನೆಯಲ್ಲಿ ಮಾಹಿತಿ ನೀಡಿದ್ದರು. ಅಷ್ಟರಲ್ಲಿ ಉಷಾ ಎದ್ದು ಹೊಗೆಯಿಂದ ಕೆಮ್ಮುತ್ತಾ ಹೊರಗೆ ಬಂದಿದ್ದರು.
ಅವರ ಪತಿ ಮೂರು ವರ್ಷಗಳ ಹಿಂದೆ ಹೃದಯಾಘಾತದಿಂದ ಮೃತರಾಗಿದ್ದರು.
ಮನೆಯಲ್ಲಿ ಪುತ್ರ ಮತ್ತು ಮೊಮ್ಮಗ ಇದ್ದರು. ಘಟನೆಗೆ ಸ್ಪಷ್ಟ ಕಾರಣ ತಿಳಿದಿಲ್ಲ. ಬಚ್ಚಲು ಮನೆ, ಹತ್ತಿರದ ಕೋಣೆಗಳ ವಿದ್ಯುತ್ ವಯರ್ ಬೆಂಕಿಯಿಂದ ಕರಕಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು