9:08 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಜನಪರ ಯೋಜನೆಗಳು ಮನೆಮನೆ ತಲುಪಲಿ: ಬಿಜೆಪಿ ಜಿಲ್ಲಾ ವಕ್ತಾರ ಮಾಧವ ಮಾವೆ

09/09/2025, 14:00

ಬಂಟ್ವಾಳ(reporterkarnataka.com): ಸರಕಾರದಿಂದ ಸಿಗುವ ಸವಲತ್ತುಗಳನ್ನು ಬಡವರ ಮನೆಗೆ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡುವ ಮೂಲಕ ಪಕ್ಷ ಸಂಘಟನೆಯನ್ನು ಬಲಪಡಿಸಬೇಕು.ಕೇಂದ್ರ ಸರಕಾರದ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಪರ ಯೋಜನೆಗಳಿಂದ ರಾಷ್ಟ್ರದ ಅಭಿವೃದ್ಧಿಯೊಂದಿಗೆ ಜನಜೀವನಮಟ್ಟ ಸುಧಾರಿಸುತ್ತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಾಧವ ಮಾವೆ ಹೇಳಿದರು.
ಅವರು ಬಿಜೆಪಿ ಬಂಟ್ವಾಳ ಮಂಡಲದ ಪೆರಾಜೆ ಶಕ್ತಿ ಕೇಂದ್ರದಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ಸಭಾಂಗಣದಲ್ಲಿ ಏರ್ಪಡಿಸಲಾದ ಕಾರ್ಯಕರ್ತರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಮಾತನಾಡಿದರು.
ಪೆರಾಜೆ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಾಣಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಅರವಿಂದ‌ ರೈ , ಬಂಟ್ವಾಳ ಮಂಡಲ‌ ಅಭ್ಯಾಸ ವರ್ಗ ಸಂಚಾಲಕ ಹರೀಶ ಶೆಟ್ಟಿ,ಗ್ರಾಮ ಪಂಚಾಯತ್ ಸದಸ್ಯರಾದ ರಾಜಾರಾಮ ಕಾಡೂರು,ಹರೀಶ ರೈ ಪಾಣೂರು, ಮಮತಾ ತಿಲಕ ಗೌಡ ಉಪಸ್ಥಿತರಿದ್ದರು.


ಹಿರಿಯ ಸಹಕಾರಿ ಧುರೀಣ ಬಿ.ಟಿ.ನಾರಾಯಣ ಭಟ್ ದೀಪಬೆಳಗಿಸಿ ಚಾಲನೆ ನೀಡಿದರು. ಮಂಡಲ ಕಾರ್ಯದರ್ಶಿ ರವೀಶ ಶೆಟ್ಟಿ ಕರ್ಕಳ ಉದ್ಘಾಟನಾ ಭಾಷಣ ಮಾಡಿದರು. ಬಿಜೆಪಿ ನಾಯಕರಾದ ಸಂದೀಪ್ ಶೆಟ್ಟಿ ಅರೆಬೆಟ್ಟು,ಶಿವಪ್ರಸಾದ ಶೆಟ್ಟಿ, ಸುಲೋಚನಾ ಜಿ.ಕೆ.ಭಟ್ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಬೂತ್ ಸಮಿತಿ‌ ಅಧ್ಯಕ್ಷರಾದ ಗಣೇಶ ಕೊಂಕಣ ಪದವು,ಲೋಹಿತ್ ಮಂಜೊಟ್ಟಿ,ಪುರುಷೋತ್ತಮ ಮಡಲ ವಿವಿಧ ಗೋಷ್ಠಿಗಳ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿಯ ಪ್ರಮುಖರಾದ ದೇವಪ್ಪ ಪೂಜಾರಿ, ಸುದರ್ಶನ ಬಜ,ಹಿರಿಯ ಕಾರ್ಯಕರ್ತ ರಾದ ರಾಮಣ್ಣ ಗೌಡ ದೆಪ್ಪೊಳಿ,ಸೀತಾರಾಮ ನಾಯ್ಕ ಪಾಳ್ಯ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಕ್ತಿ ಕೇಂದ್ರ ಅಭ್ಯಾಸ ವರ್ಗದ ಸಂಚಾಲಕ ಉಮೇಶ ಎಸ್ಪಿ ಸ್ವಾಗತಿಸಿದರು. ಯತಿರಾಜ ಪಿ. ಕಾರ್ಯಕ್ರಮ
ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು