5:20 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕುಶಾಲನಗರದ ರಸಲ್ ಪುರದಲ್ಲಿ ಹುಲಿ ಸಂಚಾರ: ಜನವಸತಿ ಪ್ರದೇಶದಲ್ಲಿ ಹೆಜ್ಜೆ ಗುರುತು ಪತ್ತೆ; ಸಾರ್ವಜನಿಕರಲ್ಲಿ ಆತಂಕ

10/09/2025, 10:20

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲೂ ಕಿನ ಗುಡ್ಡೆ ಹೊಸೂರು ಸಮೀಪದ ರಸಲ್ ಪುರದ ಬಳಿ ಹುಲಿ ಸಂಚಾರ ನಡೆದಿದೆ.

ಇಲ್ಲಿನ ಖಾನ್ ಕುಟುಂಬಸ್ಥರ ಮನೆಯ ಸುತ್ತ ಮುತ್ತ ಪ್ರದೇಶದಲ್ಲಿ ಹುಲಿ ಓಡಾಡಿರುವುದು ಕಂಡು ಬಂದಿದೆ. ಇಲ್ಲಿನ ಜನವಸತಿ ಪ್ರದೇಶದ ಅಲ್ಲಲ್ಲಿ ಹುಲಿ ಹೆಜ್ಜೆ ಗುರುತುಗಳು ಕಂಡು ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆನೆ ಕಾಡು ಮತ್ತು ದುಬಾರೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ರಸಲ್ಪುರ ಸಮೇಪದ ಚಿಕ್ಲಿ ಹೊಳೆ ಜಲಾಶಯ ಮಾರ್ಗದಲ್ಲಿ ಈ ಹಿಂದೆ ಹುಲಿಯನ್ನು ಸ್ಥಳೀಯರು ಗುರುತಿಸಿದ್ದರು, ಈ ಬಗ್ಗೆ ಹಲವು ಸಭೆಗಳು ನಡೆದಿದ್ದು ವನ್ಯಜೀವಿಗಳ ಉಪಟಳ ನಿಯಂತ್ರಣಕ್ಕೆ ಬಾರದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು