ಇತ್ತೀಚಿನ ಸುದ್ದಿ
Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿ ಆಚರಣೆ
10/09/2025, 11:08

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಮನೋಜ್ ಶಾಂತಿ ಸವರು ಗುರುಪೂಜೆ ನಡೆಸಿ, ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ , ನಿರ್ದೇಶಕರುಗಳಾದ ರಮಾನಾಥ್ ಸನಿಲ್, ದಿವಾಕರ್ ಬಿಪಿ, ಗೋಪಾಲ್ ಎಂ, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ವಾಮನ್ ಕೆ. ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.