6:04 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ: ಅದ್ಯಪಾಡಿಗೆ ಸರಕಾರಿ ಬಸ್ ಮತ್ತೆ ಆರಂಭಿಸಲು ಆಗ್ರಹ

11/09/2025, 11:27

ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು.
ಮಂಗಳೂರು ಅದ್ಯಪಾಡಿಗೆ ಇದ್ದಂತಹ ಸರಕಾರಿ ಬಸ್ಸು ಪ್ರಸ್ತುತ ಸ್ಥಗಿತಗೊಂಡಿದ್ದು ಪುನರ್ ಪ್ರಾರಂಬಿಸುವಂತೆ ಮನವಿ ಸ್ವೀಕರಿಸಲಾಯಿತು.

ಮಂಗಳೂರಿನಿಂದ -ಗುರುಪುರ-ಕೈಕಂಬ ಮಾರ್ಗವಾಗಿ ಕಟೀಲ್‌ ಕ್ಷೇತ್ರಕ್ಕೆ ಸರಕಾರಿ ಬಸ್ಸು ವ್ಯವಸ್ಥೆ ಕಲ್ಪಿಸುವಂತೆ ಸದಸ್ಯರು ಸಭೆಯಲ್ಲಿ ಬೇಡಿಕೆ ಇಟ್ಟಾಗ ಈ ಬಗ್ಗೆ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ ನಿರ್ಮಲಾ ಎ. (ಸಹಾಯಕ ವ್ಯವಸ್ಥಾಪಕರು ಕೆ,.ಎಸ್.ಆರ್.ಟಿ.ಸಿ ಮಂಗಳೂರು) ಅವರು ಸಭೆಯಲ್ಲಿ ತಿಳಿಸಿದರು.
ತಾಲೂಕು ಪಂಚಾಯತ್ ಸಹಾಯಕ ಲೆಕ್ಕಧಿಕಾರಿ ಪರಮೇಶ್ವರ ಅವರು ಸಮಿತಿಯ ಸದಸ್ಯರು ಹಾಗೂ ಇಲಾಖಾ ಅಧಿಕಾರಿಗಳಿಗೆ ಸ್ವಾಗತಿಸಿದರು. ತಾಲೂಕು ಮಟ್ಟದ ಅನುಷ್ಟಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಇವರು ಧನ್ಯವಾದ ಸಮರ್ಪಿಸಿದರು. ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಅಲ್ ಸ್ಟನ್ ಡಿ ಕುನ್ಹ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ, ಪ್ರಶಾಂತ್ ಎಸ್, ನವಾಜ್, ಶೈಲಾ ನೀತಾ ಡಿ ಸೋಜಾ, ಮೊಹಮ್ಮದ್ ರಫೀಕ್, ರಿತೇಶ್ ಅಂಚನ್, ಜಯಂತಿ, ವಿದ್ಯಾ, ಶ್ರೀಧರ ಪಂಜ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ತಾಪಂ ಅಧಿಕಾರಿ ವರ್ಗದವರು, ತಾಲೂಕು ಐಇಸಿ ಸಂಯೋಜಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು