11:52 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

11/09/2025, 17:51

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿವಸದ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಸಂಘದ ಪದಾಧಿಕಾರಿಗಳ ಅಯ್ಕೆ ಕಾರ್ಯಕ್ರಮವು ಮಂಗಳೂರು ಕೊಡಿಯಲ್ ಬೈಲ್ ಬೆಸೆಂಟ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸೈಂಟ್ ಅಲೋಷಿಯಸ್ ಡಿಮ್ಡ್ ವಿಶ್ವವಿದ್ಯಾಲಯದ ಡಾ. ರೋಸ್ ವೀರ ಡಿಸೋಜ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ಉಪನಿರ್ದೇಶಕರಾದ ರಾಜೇಶ್ವರಿ ಎಚ್ ವಹಿಸಿದ್ದರು ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಜಯಾನಂದ ಸುವರ್ಣ, ಬೆಸೆಂಟ್ ನ್ಯಾಷನಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಯಕ್ ರೂಪ್ ಸಿಂಗ್,ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಚಂದ್ರನಾಥ ಎಂ,ಕಾರ್ಯದರ್ಶಿ ದಿವ್ಯಕುಮಾರಿ ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಚಂದ್ರನಾಥ.ಎಂ ಚೇಳೈರು, ಕಾರ್ಯದರ್ಶಿ ರಂಜಿತಾ ತೆಂಕಮಿಜಾರು,ಖಚಾಂಚಿಯಾಗಿ ವನಿತಾ ಮಂಗಳೂರು ಉಪಾಧ್ಯಕ್ಷರಾಗಿ ಮಹಾವೀರ,ಶುಭಾಪೌಲ್,ಸಂದೀಪ್ ಪೂಜಾರಿ,ತಾಲ್ಲೂಕು ಪ್ರತಿನಿಧಿಗಳಾಗಿ ವೆಂಕಟೇಶ್, ದಾಮೋದರ್ ಎನ್, ಜುಬೇದಾ,ವಿಶಾಂತ್ ಶೆಟ್ಟಿ, ಜಯಶ್ರೀ, ಶಿಲ್ಪ, ಭರತ್ ಕುಮಾರ್, ಸುನಿಲ್ ಕುಮಾರ್ ಹಾಗೂ ಸುರೇಶ್ ಎನ್ ರವರನ್ನು ಅಯ್ಕೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಸೇವೆಯಿಂದ ನಿವೃತ್ತರಾದ ಕಾಟಿಪಳ್ಳ ನಾರಾಯಣ ಗುರು ಕಾಲೇಜಿನ ಪ್ರಾಂಶುಪಾಲರಾದ ಉಮೇಶ್ ಕರ್ಕೇರ ಇವರನ್ನು ಸನ್ಮಾನಿಸಲಾಯಿತು ಜಿಲ್ಲೆಯಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಕ್ರಡಿಯ ರಶ್ಮಿ, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬನಾವತ್ ಮಯುಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಕಾರ್ತಿಕ್ ಡಿ.ಸಿ , ಶ್ರೀ ಸುಬ್ರಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪುನೀತ್ ಪಿ.ಜೆ ಯವರನ್ನು ಅಭಿನಂದಿಸಲಾಯಿತು ದ್ವೀತಿಯ ಪಿಯುಸಿಯಲ್ಲಿ 100% ಅಂಕ ಫಲಿತಾಂಶ ದಾಖಲಿಸಿದ 40 ಉಪನ್ಯಾಸಕರನ್ನು ಗೌರವಿಸಲಾಯಿತು

ಇತ್ತೀಚಿನ ಸುದ್ದಿ

ಜಾಹೀರಾತು