2:19 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕುಶಾಲನಗರ: ಲಂಚ ಸ್ವೀಕರಿಸುತ್ತಿದ್ದ ವೇಳೆ ನೀರಾವರಿ ನಿಗಮ ಲೆಕ್ಕ ಸಹಾಯಕ ಲೋಕಾಯುಕ್ತ ಬಲೆಗೆ

11/09/2025, 22:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರದಲ್ಲಿರುವ ಕಾವೇರಿ ನೀರಾವರಿ ನಿಗಮದ ಹಾರಂಗಿ ಪುನರ್ವಸತಿ ವಿಭಾಗದ ಕಚೇರಿಯ ಕಾರ್ಯಪಾಲಕ ಅಭಿಯಂತರ ಹಾಗೂ ಕಚೇರಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಲಂಚ ಸ್ವೀಕಾರ ಸಂದರ್ಭ ಲೋಕಾಯುಕ್ತ ದಾಳಿ‌ ನಡೆಸಿದ ಘಟನೆ ನಡೆದಿದೆ.
ವಿದ್ಯುತ್ ಗುತ್ತಿಗೆದಾರ ಪ್ರಸನ್ನ ಎಂಬಾತನಿಂದ ಒಂದೂವರೆ ಲಕ್ಷದ ಕಾಮಗಾರಿಯ ಬಿಲ್ ಮಾಡಲು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುಣಸೂರಿನ ಆರ್.ಕೃಷ್ಣ ಎಂಬಾತ 35 ಸಾವಿರಕ್ಕೆ‌ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ಈ ಪೈಕಿ ಗುರುವಾರ 20 ಸಾವಿರ ಹಣ ಪಡೆಯುತ್ತಿದ್ದ ಸಂದರ್ಭ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ, ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಲೋಕೇಶ್, ವೀಣಾ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಮುಖ್ಯ ಪೇದೆ ಲೋಕೇಶ್ ಸೇರಿದಂತೆ ಸಿಬ್ಬಂದಿಗಳಾದ ಮಂಜುನಾಥ್, ಶಶಿ, ಲೋಹಿತ್, ಪ್ರವೀಣ್ ಕುಮಾರ್, ದೀಪಿಕಾ, ಅರುಣ್ ಕುಮಾರ್, ಸಲಾಹುದ್ದಿನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು