2:37 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಾರಾಯಣಗುರು ಜಯಂತಿ ವಿಶೇಷ ಉಪನ್ಯಾಸ

11/09/2025, 22:09

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ಆಶ್ರಯದಲ್ಲಿ ನಾರಾಯಣಗುರು ಜಯಂತಿ – 2025 ಗುರುವಾರ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಚರಿಸಲಾಯಿತು.


ಆಶೀರ್ವಚನವನ್ನು ನೀಡಿದ ಆರ್ಯ ಈಡಿಗ ಮಹಾಸಂಸ್ಥಾನ, ಸೋಲೂರಿನ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳು ಮಾತನಾಡಿ, ನಾರಾಯಣ ಗುರುಗಳು ಯಾವುದನ್ನೂ ಬಯಸಲಿಲ್ಲ, ತನ್ನ ಸರ್ವಸ್ವವನ್ನೂ ಸಮಾಜಕ್ಕಾಗಿ ಧಾರೆಯೆರೆದವರು, ಯಾವುದೆ ಪ್ರತಿಭಟನೆ, ಜಗಳವಿರದೇ ಜನರನ್ನು ಪರಿವರ್ತಿಸುವ ಕಾರ್ಯವನ್ನು ಗುರುಗಳು ಮಾಡಿದರು.ದಲಿತರನ್ನು ನೂರು ಮೈಲಿ ದೂರ ಇಡುತ್ತಿದ್ದ ಕಾಲದಲ್ಲಿ, ನಾರಾಯಣಗುರು ಅವರಂತವರು ಆ ಮಕ್ಕಳನ್ನು ತಮ್ಮ ಮಡಿಲಲ್ಲಿ ಕೂಸಿನಂತೆ ಕೂರಿಸಿಕೊಂಡು ಪ್ರಾರ್ಥನೆ ಹೇಳಿಕೊಡುತ್ತಿದ್ದರು. “ದೇವಾಲಯಕ್ಕೆ ಪ್ರವೇಶವಿಲ್ಲ” ಎಂದು ತಡೆದಾಗ, ಅವರು ನದಿಗೆ ಹಾರಿ ಶಿವಲಿಂಗ ತಂದು ಕಣ್ಣೀರಿನಿಂದ ಅಭಿಷೇಕ ಮಾಡಿ ಪ್ರತಿಷ್ಠಾಪನೆ ಮಾಡಿದರು. ಇದರಿಂದ ದೇವರು ಎಲ್ಲರಿಗೂ ಸಮಾನವಾಗಿ ಲಭ್ಯ ಎಂಬ ಸಂದೇಶವನ್ನು ನೀಡಿದ್ದಾರೆ. ಆ ಮೂಲಕ ಸಮಾಜದಲ್ಲಿ ಸಮಾನತೆಯ ಬೆಳಕನ್ನು ಹರಿಸಿದರು ಎಂದರು.
ಶ್ರೀಲಂಕಾಕ್ಕೆ ತೆರಳಿದ ಸಂದರ್ಭ ಜನರು ಬಡವರೆಂದು ಗೋಗರೆದಾಗ ರಾತ್ರಿ ಶಾಲೆ ಆರಂಭಿಸುವಂತೆ ಕರೆ ನೀಡಿದರು ಈ ಸಂದರ್ಭ ಹಲವಾರು ರಾತ್ರಿ ಶಾಲೆ ಆರಂಭಗೊಂಡಿತು. ಆ ಬಳಿಕ ಬ್ರಿಟಿಷರ ಫ್ಯಾಕ್ಟರಿಗಳಲ್ಲಿ ಕೆಲಸ ಸಿಕ್ಕಿತು. ಈ ಮೂಲಕ ಶಿಕ್ಷಣಕ್ಕೂ ಅಪಾರ ಪ್ರಾಮುಖ್ಯತೆ ನೀಡಿದ್ದರು ಎಂದರು.
ಈ ಸಂದರ್ಭದಲ್ಲಿ “ವಿಶ್ವದ ಸಂತಸತ್ವ ನಾರಾಯಣಗುರು” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ನಿಕಟಪೂರ್ವ ನಿರ್ದೇಶಕರಾದ ಡಾ. ಗಣೇಶ ಅಮೀನ್ ಸಂಕಮಾರ್ ನೀಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸಿದರು. ಪ್ರೊ. ಗಣಪತಿ ಗೌಡ ಎಸ್.(ಪ್ರಾಂಶುಪಾಲರು), ಡಾ. ಜಯರಾಜ್ ಎನ್. (ನಿರ್ದೇಶಕರು) ಹಾಗೂ ರಾಜು ಮೊಗವೀರ ಕೆ.ಕೆ.ಎ.ಎಸ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು