10:42 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಾರಾಯಣಗುರು ಜಯಂತಿ ವಿಶೇಷ ಉಪನ್ಯಾಸ

11/09/2025, 22:09

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ಆಶ್ರಯದಲ್ಲಿ ನಾರಾಯಣಗುರು ಜಯಂತಿ – 2025 ಗುರುವಾರ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಚರಿಸಲಾಯಿತು.


ಆಶೀರ್ವಚನವನ್ನು ನೀಡಿದ ಆರ್ಯ ಈಡಿಗ ಮಹಾಸಂಸ್ಥಾನ, ಸೋಲೂರಿನ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳು ಮಾತನಾಡಿ, ನಾರಾಯಣ ಗುರುಗಳು ಯಾವುದನ್ನೂ ಬಯಸಲಿಲ್ಲ, ತನ್ನ ಸರ್ವಸ್ವವನ್ನೂ ಸಮಾಜಕ್ಕಾಗಿ ಧಾರೆಯೆರೆದವರು, ಯಾವುದೆ ಪ್ರತಿಭಟನೆ, ಜಗಳವಿರದೇ ಜನರನ್ನು ಪರಿವರ್ತಿಸುವ ಕಾರ್ಯವನ್ನು ಗುರುಗಳು ಮಾಡಿದರು.ದಲಿತರನ್ನು ನೂರು ಮೈಲಿ ದೂರ ಇಡುತ್ತಿದ್ದ ಕಾಲದಲ್ಲಿ, ನಾರಾಯಣಗುರು ಅವರಂತವರು ಆ ಮಕ್ಕಳನ್ನು ತಮ್ಮ ಮಡಿಲಲ್ಲಿ ಕೂಸಿನಂತೆ ಕೂರಿಸಿಕೊಂಡು ಪ್ರಾರ್ಥನೆ ಹೇಳಿಕೊಡುತ್ತಿದ್ದರು. “ದೇವಾಲಯಕ್ಕೆ ಪ್ರವೇಶವಿಲ್ಲ” ಎಂದು ತಡೆದಾಗ, ಅವರು ನದಿಗೆ ಹಾರಿ ಶಿವಲಿಂಗ ತಂದು ಕಣ್ಣೀರಿನಿಂದ ಅಭಿಷೇಕ ಮಾಡಿ ಪ್ರತಿಷ್ಠಾಪನೆ ಮಾಡಿದರು. ಇದರಿಂದ ದೇವರು ಎಲ್ಲರಿಗೂ ಸಮಾನವಾಗಿ ಲಭ್ಯ ಎಂಬ ಸಂದೇಶವನ್ನು ನೀಡಿದ್ದಾರೆ. ಆ ಮೂಲಕ ಸಮಾಜದಲ್ಲಿ ಸಮಾನತೆಯ ಬೆಳಕನ್ನು ಹರಿಸಿದರು ಎಂದರು.
ಶ್ರೀಲಂಕಾಕ್ಕೆ ತೆರಳಿದ ಸಂದರ್ಭ ಜನರು ಬಡವರೆಂದು ಗೋಗರೆದಾಗ ರಾತ್ರಿ ಶಾಲೆ ಆರಂಭಿಸುವಂತೆ ಕರೆ ನೀಡಿದರು ಈ ಸಂದರ್ಭ ಹಲವಾರು ರಾತ್ರಿ ಶಾಲೆ ಆರಂಭಗೊಂಡಿತು. ಆ ಬಳಿಕ ಬ್ರಿಟಿಷರ ಫ್ಯಾಕ್ಟರಿಗಳಲ್ಲಿ ಕೆಲಸ ಸಿಕ್ಕಿತು. ಈ ಮೂಲಕ ಶಿಕ್ಷಣಕ್ಕೂ ಅಪಾರ ಪ್ರಾಮುಖ್ಯತೆ ನೀಡಿದ್ದರು ಎಂದರು.
ಈ ಸಂದರ್ಭದಲ್ಲಿ “ವಿಶ್ವದ ಸಂತಸತ್ವ ನಾರಾಯಣಗುರು” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ನಿಕಟಪೂರ್ವ ನಿರ್ದೇಶಕರಾದ ಡಾ. ಗಣೇಶ ಅಮೀನ್ ಸಂಕಮಾರ್ ನೀಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸಿದರು. ಪ್ರೊ. ಗಣಪತಿ ಗೌಡ ಎಸ್.(ಪ್ರಾಂಶುಪಾಲರು), ಡಾ. ಜಯರಾಜ್ ಎನ್. (ನಿರ್ದೇಶಕರು) ಹಾಗೂ ರಾಜು ಮೊಗವೀರ ಕೆ.ಕೆ.ಎ.ಎಸ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು