6:30 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Mangaluru | ವಿಚ್ಚೇಧನಕ್ಕೆ ಕೋರ್ಟ್ ಮೆಟ್ಟಿಲೇರಿದವರನ್ನು ಮತ್ತೆ ಒಂದುಗೂಡಿಸಿದ ಲೋಕ್ ಅದಾಲತ್

14/09/2025, 00:11

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ಕಾರ್ಯಕ್ರಮವು ವಿಚ್ಚೇಧನಕ್ಕೆ ಮುಂದಾಗಿದ್ದ ದಂಪತಿಯನ್ನು ಒಂದುಗೂಡಿಸುವಲ್ಲಿ ಯಶಸ್ವಿಯಾಯಿತು.
ಹರೀಶ್- ಶಶಿಕಲಾ ಎಂಬ ದಂಪತಿಯು ದಾಂಪತ್ಯ ಭಿನ್ನಾಭಿಪ್ರಾಯಗಳಿಂದ ವಿಚ್ಚೇಧನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನಂತರ ಈ ಪ್ರಕರಣವನ್ನು ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದ ಮೂಲಕ ಸರಿಪಡಿಸಲು ಪ್ರಯತ್ನಿಸಿ, ಗಂಡ ಹೆಂಡತಿಯ ಮಧ್ಯೆ ಸಂಧಾನ ನಡೆಸಿ, ಒಂದುಗೂಡಿ ದಾಂಪತ್ಯ ಜೀವನ ಮುಂದುವರೆಸುವುದರ ಬಗ್ಗೆ ಉಭಯ ಪಕ್ಷಗಾರರಿಗೆ ಮನವರಿಕೆ ಮಾಡಲಾಗಿದೆ. ಸಂಧಾನಕ್ಕೆ ಒಪ್ಪಿ, ದಂಪತಿ ಮತ್ತೆ ಒಂದುಗೂಡಿ ಜೀವನ ಮುಂದುವರಿಸಲು ಒಪ್ಪಿದ್ದರು.

ಅದರಂತೆ ಶನಿವಾರ ಲೋಕ ಅದಾಲತ್ ಗೆ ಆಗಮಿಸಿದ್ದ ಹರೀಶ್-ಶಶಿಕಲಾ ದಂಪತಿಯು ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಸವರಾಜ ಅವರ ಸಮಕ್ಷಮದಲ್ಲಿ ಪರಸ್ಪರ ಹಾರ ಬದಲಾಯಿಸುವ ಮೂಲಕ ಒಂದಾಗುವ ಮೂಲಕ ಪ್ರಕರಣ ಮುಕ್ತಾಯಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ನ್ಯಾಯಾವಾಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು