4:30 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ; ಮುದ್ದೆಯಲ್ಲಿ ವಿಷ ಬೆರೆಸಿ ಹತ್ಯೆ ಮಾಡಿದ್ದ ಸತಿ

14/09/2025, 17:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪರಿಹಾರದ ಆಸೆಗಾಗಿ ಪತ್ನಿಯು ಪತಿಯನ್ನೇ ಕೊಂದು ನಂತರ ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಈಗ ಸಿಕ್ಕಿಬಿದ್ದಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಚಿಕ್ಕ ಹೆಜ್ಜೂರು ಗ್ರಾಮದ ನಿವಾಸಿ ವೆಂಕಟಸ್ವಾಮಿ ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಪತ್ನಿ ಸಲ್ಲಾಪುರಿ ಎಂಬಾಕೆಯೇ ತನ್ನ ಗಂಡ ವೆಂಕಟಸ್ವಾಮಿಯನ್ನ ಹತ್ಯೆಗೈದು ನಂತರ ಹುಲಿ ಕೊಂದಿದೆ ಎಂದು ನಾಟಕವಾಗಿ ಇದೀಗ ಸಿಕ್ಕಿಬಿದ್ದಿದ್ದಾಳೆ. ಕಳೆದ ಕೆಲ ವರ್ಷಗಳಿಂದ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ಸಣ್ಣ ಮನೆಯೊಂದನ್ನು ಕಟ್ಟಿಕೊಂಡು ದಂಪತಿ ವಾಸವಾಗಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಪತಿ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ಸಲ್ಲಾಪುರಿ ಪೊಲೀಸರಿಗೆ ದೂರು ನೀಡಿದ್ದಳು. ಅಷ್ಟೇ ಅಲ್ಲದೆ ಪತಿಯನ್ನು ಹುಲಿ ಎಳೆದುಕೊಂಡು ಹೋಗಿರಬಹುದು ಎಂದು ಅನುಮಾನ ಕೂಡ ವ್ಯಕ್ತಪಡಿಸಿದ್ದಳು.
ಈ ಮಧ್ಯೆ ಕೆಲ ದಿನಗಳ ಹಿಂದೆ ಹೆಜ್ಜೂರು ಗ್ರಾಮದ ಬಳಿಯಲ್ಲಿ ಹುಲಿ ಓಡಾಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಪತ್ನಿ ಸಲ್ಲಾಪುರಿ ಹುಲಿ ಕೊಂದಿದೆ ಎಂದು ದೂರು ನೀಡಿದ್ದಳು. ದೂರು ಸ್ವೀಕರಿಸಿದ್ದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟಸ್ವಾಮಿಗೆ ಹುಡುಕಾಡಿದ್ದಾರೆ. ಪರಿಶೀಲನೆ ವೇಳೆ ಪ್ರಾಣಿ ಹೆಜ್ಜೆ ಗುರುತು ಪ್ತತೆಯಾಗಿತ್ತು. ಆದರೇ ಹುಲಿ ಎಲ್ಲೂ ಕಂಡಿರಲಿಲ್ಲ. ಮನೆ ಹಿಂದಿನ ತಿಪ್ಪೆಗುಂಡಿಯಲ್ಲೇ ವೆಂಕಟಸ್ವಾಮಿ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸ್ ವಿಚಾರಿಸಿದಾಗ, ಪರಿಹಾರದ ಆಸೆಗೆ ಪತಿಯನ್ನು ಕೊಂದು, ಈ ನಾಟಕ ಆಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಮುದ್ದೆಯಲ್ಲಿ ವಿಷ ಬೆರೆಸಿ ಕೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು