2:17 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಸುಂಟಿಕೊಪ್ಪ; ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿದ ಮೂವರು ಮಹಿಳೆಯರು

15/09/2025, 10:44

ಗಿರಿಧರ್ ಕೊಂಪುಳಿರ ಮಡಿಕೇರಿ

info.repprterkarnataka@gmail.com

ಚಿನ್ನ ಖರೀದಿಸುವ ಸೋಗಿನಲ್ಲಿ ಚಿನ್ನದ ಅಂಗಡಿಗೆ ಬಂದ ಮೂವರು ಮಹಿಳೆಯರು ಕ್ಷಣಾರ್ಧದಲ್ಲಿ ಚಿನ್ನದ ಸರವನ್ನು ಕದ್ದೋಯ್ದ ಘಟನೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ ನಡೆದಿದೆ.
ಸುಂಟಿಕೊಪ್ಪ ಮುಖ್ಯ ರಸ್ತೆಯಲ್ಲಿರುವ ಫ್ಯಾಷನ್ ಜ್ಯುವೆಲ್ಲರಿ ಶಾಪ್ ನಲ್ಲಿ ಕಳ್ಳಿಯರು ಕರಾಮತ್ತನ್ನು ತೋರಿಸಿ 22 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳತನ ಮಾಡಿದ್ದಾರೆ.


ನೆನ್ನೆ ಸಂಜೆ 5 ಗಂಟೆ ಸಮಯದಲ್ಲಿ ಈ ಚಿನ್ನದ ಅಂಗಡಿಗೆ ಮಗುವಿನೊಂದಿಗೆ ಬಂದಿದ್ದ ಮೂವರು ಮಹಿಳೆಯರು ಚಿನ್ನದ ಆಭರಣ ಖರೀದಿಸುವ ನಾಟಕವಾಡಿದ್ದಾರೆ. ಅಂಗಡಿಯವರ ಅರಿವಿಗೆ ಬಾರದಂತೆ ಕ್ಷಣಾರ್ಧದಲ್ಲಿ ಕೈಚಳಕ ತೋರಿಸಿ 22 ಗ್ರಾಂ ತೂಕದ ಚಿನ್ನದ ಸರವನ್ನು ಎಗರಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ರಾತ್ರಿ 9.30 ರ ಸಮಯದಲ್ಲಿ ಸ್ಟಾಕ್ ಚೆಕ್ ಮಾಡುವಾಗ ಚಿನ್ನದ ಸರ ಕಳ್ಳತನ
ಆಗಿರುವುದು ಅರಿವಿಗೆ ಬಂದಿದೆ.
CC TV ಚೆಕ್ ಮಾಡುವಾಗ ಈ ಮಹಿಳೆಯರ ಕರಾಮತ್ತು ಸೆರೆಯಾಗಿರುವುದು ಕಂಡು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು