10:02 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

Mangaluru | ಸಂತ ವಿನ್ಸೆಂಟ್ ಪಾವ್ಲ್ ಪ್ರಾದೇಶಿಕ ಸಿಟಿ ವಲಯದ ಸಾಮಾನ್ಯ ಸಭೆ: ಆಧ್ಯಾತ್ಮಿಕ ಸಮಾಲೋಚನೆ

15/09/2025, 19:16

ಮಂಗಳೂರು(reporter Karnataka.com): ಸಮಾಜ ಸೇವಾ ಸಂಘಟನೆ ಸಂತ ವಿನ್ಸೆಂಟ್ ಪಾವ್ಲ್ ಸಭಾ ಇದರ ಮಂಗಳೂರು ಪ್ರಾದೇಶಿಕ ಸಿಟಿ ವಲಯದ ವಾರ್ಷಿಕ ಸಾಮಾನ್ಯ ಸಭೆ ಹಾಗೂ ಆಧ್ಯಾತ್ಮಿಕ ಸಮಾಲೋಚನೆಯು ನಗರದ ದೇರೆಬೈಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಸುಖ ಜೀವನವನ್ನು ದಾನ ಹಾಗೂ ಧರ್ಮದ ಮೂಲಕ ನಡೆಸ ಬಹುದು ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಈ ಸಭೆಯಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂದನೀಯ ಫಾ. ಜೋಸೆಫ್ ಮಾರ್ಟಿಸ್ ಅವರು ಮಾತನಾಡಿ ಸಂತ ವಿನ್ಸೆಂಟ್ ಪಾವ್ಲ್ ಸಭೆಯ ಸದಸ್ಯರು ಯಾವುದೇ ಪ್ರಚಾರವಿಲ್ಲದೆ ಗೌಪ್ಯವಾಗಿ ದಾನ, ಧರ್ಮ, ಬಡವರ ಸೇವೆಯನ್ನು ಮಾಡುತ್ತಿದ್ದು, ಈ ಸೇವೆ ದೇವರ ಸೇವೆಗೆ ಸಮಾನ. ಬಡತನವು ಖಂಡಿತಾ ಶಾಪವಲ್ಲ. ಯಾವುದೇ ಪರಿಸ್ಥಿತಿಯಲ್ಲಿಯೂ ನಾವು ಧೃತಿಗೆಡದೆ ಪ್ರಯತ್ನವನ್ನು ಮುಂದುವರಿಸಿದರೆ ಯಶಸ್ಸು ಸಾಧಿಸ ಬಹುದು ಎಂದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಿಟಿ ವಲಯದ ಅಧ್ಯಕ್ಷ ರಿಚಾರ್ಡ್ ಪಿಂಟೊ, ಕಾರ್ಯದರ್ಶಿ ಐರಿನ್ ಪಿಂಟೊ, ಖಜಾಂಚಿ ಯೂಜಿನ್ ಲೋಬೊ, ದೇರೆಬೈಲ್ ಘಟಕದ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್, ಪ್ರಾದೇಶಿಕ ಸಿಟಿ ವಲಯದ ಉಪಾಧ್ಯಕ್ಷ ಜೋಕಿಂ ಮತ್ತು ಇತರರು ಉಪಸ್ಥಿತರಿದ್ದರು.
ಆಶಾ ಡಿ ಸಿಲ್ವಾ ನೇತೃತ್ವದ ತಂಡದಿಂದ ಪ್ರಾರ್ಥನೆ ನಡೆಯಿತು. ಕಾರ್ಯದರ್ಶಿ ಐರಿನ್ ಪಿಂಟೊ ವರದಿ ವಾಚಿಸಿದರು.
ಪ್ರಾದೇಶಿಕ ಸಿಟಿ ವಲಯವು ದೇರೆಬೈಲ್, ಕುಲಶೇಖರ, ಬೋಂದೆಲ್, ಪಾಲ್ದನೆ, ವಾಮಂಜೂರು, ಕೆಲರಾಯ್, ಬಜಾಲ್, ನೀರುಮಾರ್ಗ, ಆಂಜೆಲೋರ್, ಬಜ್ಜೋಡಿ, ಶಕ್ತಿನಗರ, ಪೆರ್ಮಾಯಿ ಚರ್ಚ್ ಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು