10:45 PM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

Mangaluru | ಸಂತ ವಿನ್ಸೆಂಟ್ ಪಾವ್ಲ್ ಪ್ರಾದೇಶಿಕ ಸಿಟಿ ವಲಯದ ಸಾಮಾನ್ಯ ಸಭೆ: ಆಧ್ಯಾತ್ಮಿಕ ಸಮಾಲೋಚನೆ

15/09/2025, 19:16

ಮಂಗಳೂರು(reporter Karnataka.com): ಸಮಾಜ ಸೇವಾ ಸಂಘಟನೆ ಸಂತ ವಿನ್ಸೆಂಟ್ ಪಾವ್ಲ್ ಸಭಾ ಇದರ ಮಂಗಳೂರು ಪ್ರಾದೇಶಿಕ ಸಿಟಿ ವಲಯದ ವಾರ್ಷಿಕ ಸಾಮಾನ್ಯ ಸಭೆ ಹಾಗೂ ಆಧ್ಯಾತ್ಮಿಕ ಸಮಾಲೋಚನೆಯು ನಗರದ ದೇರೆಬೈಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಸುಖ ಜೀವನವನ್ನು ದಾನ ಹಾಗೂ ಧರ್ಮದ ಮೂಲಕ ನಡೆಸ ಬಹುದು ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಈ ಸಭೆಯಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂದನೀಯ ಫಾ. ಜೋಸೆಫ್ ಮಾರ್ಟಿಸ್ ಅವರು ಮಾತನಾಡಿ ಸಂತ ವಿನ್ಸೆಂಟ್ ಪಾವ್ಲ್ ಸಭೆಯ ಸದಸ್ಯರು ಯಾವುದೇ ಪ್ರಚಾರವಿಲ್ಲದೆ ಗೌಪ್ಯವಾಗಿ ದಾನ, ಧರ್ಮ, ಬಡವರ ಸೇವೆಯನ್ನು ಮಾಡುತ್ತಿದ್ದು, ಈ ಸೇವೆ ದೇವರ ಸೇವೆಗೆ ಸಮಾನ. ಬಡತನವು ಖಂಡಿತಾ ಶಾಪವಲ್ಲ. ಯಾವುದೇ ಪರಿಸ್ಥಿತಿಯಲ್ಲಿಯೂ ನಾವು ಧೃತಿಗೆಡದೆ ಪ್ರಯತ್ನವನ್ನು ಮುಂದುವರಿಸಿದರೆ ಯಶಸ್ಸು ಸಾಧಿಸ ಬಹುದು ಎಂದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಿಟಿ ವಲಯದ ಅಧ್ಯಕ್ಷ ರಿಚಾರ್ಡ್ ಪಿಂಟೊ, ಕಾರ್ಯದರ್ಶಿ ಐರಿನ್ ಪಿಂಟೊ, ಖಜಾಂಚಿ ಯೂಜಿನ್ ಲೋಬೊ, ದೇರೆಬೈಲ್ ಘಟಕದ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್, ಪ್ರಾದೇಶಿಕ ಸಿಟಿ ವಲಯದ ಉಪಾಧ್ಯಕ್ಷ ಜೋಕಿಂ ಮತ್ತು ಇತರರು ಉಪಸ್ಥಿತರಿದ್ದರು.
ಆಶಾ ಡಿ ಸಿಲ್ವಾ ನೇತೃತ್ವದ ತಂಡದಿಂದ ಪ್ರಾರ್ಥನೆ ನಡೆಯಿತು. ಕಾರ್ಯದರ್ಶಿ ಐರಿನ್ ಪಿಂಟೊ ವರದಿ ವಾಚಿಸಿದರು.
ಪ್ರಾದೇಶಿಕ ಸಿಟಿ ವಲಯವು ದೇರೆಬೈಲ್, ಕುಲಶೇಖರ, ಬೋಂದೆಲ್, ಪಾಲ್ದನೆ, ವಾಮಂಜೂರು, ಕೆಲರಾಯ್, ಬಜಾಲ್, ನೀರುಮಾರ್ಗ, ಆಂಜೆಲೋರ್, ಬಜ್ಜೋಡಿ, ಶಕ್ತಿನಗರ, ಪೆರ್ಮಾಯಿ ಚರ್ಚ್ ಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು