7:51 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಬಿಜೆಪಿಯದ್ದು ದುರುದ್ದೇಶದ ಪ್ರತಿಭಟನೆ; ಕೆಂಪುಕಲ್ಲು ನಿಯಮಾವಳಿ ಸರಳೀಕರಣಕ್ಕೆ ಸಂಫುಟ ಒಪ್ಪಿಗೆ ನೀಡಿದೆ: ದ.ಕ. ಕಾಂಗ್ರೆಸ್

16/09/2025, 18:39

ಮಂಗಳೂರು(reporterkarnataka.com): ಬಿಜೆಪಿ ಕೇವಲ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ನಡೆಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲಿನ ರಾಜಸ್ವ ಧನ ಇಳಿಕೆ ಮತ್ತು ಸರಳ ಮರಳು ನೀತಿ ನಿಯಮಾವಳಿಯನ್ನು ಸರ್ಕಾರ ಈಗಾಗಲೇ ರಚಿಸಿದ್ದು, ಸಚಿವ ಸಂಪುಟದಿಂದ ಒಪ್ಪಿಗೆಯೂ ಸಿಕ್ಕಿದೆ. ಶೀಘ್ರದಲ್ಲೇ ಗೆಜೆಟ್ ನೋಟಿಫಿಕೇಶನ್ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ.
ಕೆಂಪು ಕಲ್ಲು ಸಾಗಾಟಕ್ಕೆ ‘2ಡಿ’ ಎಂಬ ಹೊಸ ರಾಯಲ್ಟಿಯನ್ನು ಸೇರಿಸಿದ ಕಾರಣದಿಂದ ಕರಾವಳಿಯಲ್ಲಿ ಕೆಂಪುಕಲ್ಲು ಸಾಗಾಟಕ್ಕೆ ಸಮಸ್ಯೆ ಆರಂಭವಾಗಿತ್ತು. ರಾಯಲ್ಟಿ ಇಳಿಸಬೇಕು ಎನ್ನುವುದು ಕೆಂಪು ಕಲ್ಲು ತೆಗೆಯುವವರ ಪ್ರಮುಖ ಬೇಡಿಕೆಯಾಗಿದ್ದು, ಅದರಂತೆ ಕೆಂಪುಕಲ್ಲು ಹೊಸ ನಿಯಮಾವಳಿಗೆ ಸಂಬಂಧಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಜಿಲ್ಲಾ ಕಾಂಗ್ರೆಸ್ ಮುಖಂಡರು ಈಗಾಗಲೇ ಈ ಬಗ್ಗೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ರಾಜಸ್ವ ಇಳಿಕೆ ಮಾಡುವುದು ಹಾಗೂ ಪರವಾನಗಿ ನೀಡುವ ವಿಧಾನವನ್ನು ಸರಳೀಕರಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಸಿದ್ದರಾಮಯ್ಯ ನೇತೃತ್ವ ರಾಜ್ಯ ಸರ್ಕಾರ ಬಡವರ ಪರ ಕಾಳಜಿ ವಹಿಸುತ್ತಿದ್ದು, ಸರಳೀಕೃತ ನಿಯಮದೊಂದಿಗೆ ಬಡವರ ಪರವಾಗಿ ನೀತಿ ರೂಪಿಸಿದೆ. ಈ ಹಿಂದೆ ಇದ್ದ 5 ಲೈಸೆನ್ಸ್ ಬದಲಿಗೆ ಈಗಾಗಲೇ 25 ಲೈಸೆನ್ಸ್‌ಗಳನ್ನು ನೀಡಲಾಗಿದೆ. ಶೀಘ್ರದಲ್ಲಿ ಸರಳೀಕೃತ ನಿಯಮದೊಂದಿಗೆ ಮರಳು ಮತ್ತು ಕೆಂಪು ಕಲ್ಲು ಅಭಾವಕ್ಕೆ ಮುಕ್ತಿ ಸಿಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು