3:18 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬಿಜೆಪಿಯದ್ದು ದುರುದ್ದೇಶದ ಪ್ರತಿಭಟನೆ; ಕೆಂಪುಕಲ್ಲು ನಿಯಮಾವಳಿ ಸರಳೀಕರಣಕ್ಕೆ ಸಂಫುಟ ಒಪ್ಪಿಗೆ ನೀಡಿದೆ: ದ.ಕ. ಕಾಂಗ್ರೆಸ್

16/09/2025, 18:39

ಮಂಗಳೂರು(reporterkarnataka.com): ಬಿಜೆಪಿ ಕೇವಲ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ನಡೆಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲಿನ ರಾಜಸ್ವ ಧನ ಇಳಿಕೆ ಮತ್ತು ಸರಳ ಮರಳು ನೀತಿ ನಿಯಮಾವಳಿಯನ್ನು ಸರ್ಕಾರ ಈಗಾಗಲೇ ರಚಿಸಿದ್ದು, ಸಚಿವ ಸಂಪುಟದಿಂದ ಒಪ್ಪಿಗೆಯೂ ಸಿಕ್ಕಿದೆ. ಶೀಘ್ರದಲ್ಲೇ ಗೆಜೆಟ್ ನೋಟಿಫಿಕೇಶನ್ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ.
ಕೆಂಪು ಕಲ್ಲು ಸಾಗಾಟಕ್ಕೆ ‘2ಡಿ’ ಎಂಬ ಹೊಸ ರಾಯಲ್ಟಿಯನ್ನು ಸೇರಿಸಿದ ಕಾರಣದಿಂದ ಕರಾವಳಿಯಲ್ಲಿ ಕೆಂಪುಕಲ್ಲು ಸಾಗಾಟಕ್ಕೆ ಸಮಸ್ಯೆ ಆರಂಭವಾಗಿತ್ತು. ರಾಯಲ್ಟಿ ಇಳಿಸಬೇಕು ಎನ್ನುವುದು ಕೆಂಪು ಕಲ್ಲು ತೆಗೆಯುವವರ ಪ್ರಮುಖ ಬೇಡಿಕೆಯಾಗಿದ್ದು, ಅದರಂತೆ ಕೆಂಪುಕಲ್ಲು ಹೊಸ ನಿಯಮಾವಳಿಗೆ ಸಂಬಂಧಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಜಿಲ್ಲಾ ಕಾಂಗ್ರೆಸ್ ಮುಖಂಡರು ಈಗಾಗಲೇ ಈ ಬಗ್ಗೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ರಾಜಸ್ವ ಇಳಿಕೆ ಮಾಡುವುದು ಹಾಗೂ ಪರವಾನಗಿ ನೀಡುವ ವಿಧಾನವನ್ನು ಸರಳೀಕರಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಸಿದ್ದರಾಮಯ್ಯ ನೇತೃತ್ವ ರಾಜ್ಯ ಸರ್ಕಾರ ಬಡವರ ಪರ ಕಾಳಜಿ ವಹಿಸುತ್ತಿದ್ದು, ಸರಳೀಕೃತ ನಿಯಮದೊಂದಿಗೆ ಬಡವರ ಪರವಾಗಿ ನೀತಿ ರೂಪಿಸಿದೆ. ಈ ಹಿಂದೆ ಇದ್ದ 5 ಲೈಸೆನ್ಸ್ ಬದಲಿಗೆ ಈಗಾಗಲೇ 25 ಲೈಸೆನ್ಸ್‌ಗಳನ್ನು ನೀಡಲಾಗಿದೆ. ಶೀಘ್ರದಲ್ಲಿ ಸರಳೀಕೃತ ನಿಯಮದೊಂದಿಗೆ ಮರಳು ಮತ್ತು ಕೆಂಪು ಕಲ್ಲು ಅಭಾವಕ್ಕೆ ಮುಕ್ತಿ ಸಿಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು