12:39 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಹಾವುಗಳ ಸೆರೆ ಹಿಡಿದು ಹಿಂಸೆ ನೀಡುವವರ ವಿರುದ್ಧ FIR ದಾಖಲಿಸಿ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ

17/09/2025, 11:58

ಬೆಂಗಳೂರು(reporterkarnataka.com): ಅಕ್ರಮವಾಗಿ ಹಾವು ಹಾಗೂ ಅವುಗಳ ಮೊಟ್ಟೆ ಗಳನ್ನು ದಾಸ್ತಾನು ಮಾಡುವವರ, ವಿಷ ತೆಗೆಯುವವರ ಮತ್ತು ಅನುಮತಿ ಇಲ್ಲದೇ ಅಕ್ರಮವಾಗಿ ವನ ಪ್ರವೇಶಿಸಿ ಸಂಶೋಧನೆ ಮಾಡುವವರ ವಿರುದ್ಧ FIR ದಾಖಲಿಸಲು ಅರಣ್ಯ, ಜೀವಿ ಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ವನ್ಯ ಜೀವಿ ಕಾಯ್ದೆ ಉಲ್ಲಂಘಿಸಿ ಕಾಳಿಂಗ ಸರ್ಪಗಳನ್ನು ಅನಧಿಕೃತವಾಗಿ ಸೆರೆ ಹಿಡಿದಿಟ್ಟು ನೆರೆ ರಾಜ್ಯದವರಿಗೆ ಅಮಾನವೀಯವಾಗಿ ಫೋಟೋ ಶೂಟ್ ಮಾಡಲು ಅವಕಾಶ ಮಾಡಿ ಕೊಡುತ್ತಿದ್ದ ಜಾಲವನ್ನು ಭೇದಿಸಿ ಪ್ರಕರಣ ದಾಖಲಿಸಲಾಗಿದೆ. ಅದೇ ರೀತಿ ಮಲೆನಾಡಿನಲ್ಲಿ ಸಹ ಸಂಶೋಧನೆಯ ಅವಧಿ ಪೂರ್ಣವಾಗಿದ್ದರೂ ಕಾಳಿಂಗ ಸರ್ಪಗಳ ಸಂಶೋಧನೆ ಹೆಸರಿನಲ್ಲಿ ವಾಣಿಜ್ಯ ಚಟುವಟಿಕೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು ಹಲವು ದೂರುಗಳು ಸ್ವೀಕೃತವಾಗಿವೆ. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ.
ಈ ಮಧ್ಯೆ ದಿನಾಂಕ 15-09-2025 ರಂದು ಶಿವಮೊಗ್ಗದ ಇಂದಿರಾನಗರ ಮತ್ತೂರು ರಸ್ತೆಯಲ್ಲಿ ಕೆಲವರು ಎರಡು ಹೆಬ್ಬಾವುಗಳನ್ನು ಹಿಡಿದು ಅವುಗಳ ಬಾಯಿಗೆ ಪ್ಲಾಸ್ಟರ್ ಹಾಕಿ ಹಿಂಸೆ ನೀಡುತ್ತಾ ಫೋಟೋ, ವಿಡಿಯೋ ಶೂಟ್ ಮಾಡಿ ವಿಕೃತಿ ಮೆರೆದಿದ್ದಾರೆ. ಇಲಾಖೆ ಸಿಬ್ಬಂದಿಗಳು ಅವುಗಳನ್ನು ವಶಕ್ಕೆ ಪಡೆದ ಬಹಳ ಹೊತ್ತಿನವರೆಗೂ ಉರಗ ರಕ್ಷ ಕರ ಕೊರತೆಯಿಂದ ಹಾವುಗಳ ಬಾಯಿಗೆ ಹಾಕಿದ್ದ ಪ್ಲಾಸ್ಟರ್ ತೆಗೆದಿರಲಿಲ್ಲ ಎಂದು ವರದಿಯಾಗಿದೆ. ಅಕ್ರಮವಾಗಿ ಹಾವು ಹಾಗೂ ಅವುಗಳ ಮೊಟ್ಟೆಗಳನ್ನು ದಾಸ್ತಾನು ಮಾಡುವವರ, ವಿಷ ತೆಗೆಯುವವರ ವಿರುದ್ಧ ಮತ್ತು ಅನುಮತಿ ಇಲ್ಲದೇ ಅಕ್ರಮವಾಗಿ ವನ ಪ್ರವೇಶಿಸಿ ಸಂಶೋಧನೆ ಮಾಡುವವರ ವಿರುದ್ಧ FIR ದಾಖಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಲು ಸಚಿವ ಈಶ್ವರ್ ಬಿ. ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು