1:09 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಪರಿಹಾರ ಘೋಷಣೆ

17/09/2025, 12:22

ಬೆಂಗಳೂರು(reporterkarnataka.com): ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ನಡೆದ-ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಹಲವು ವರ್ಷಗಳ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ‌. ತಿಮ್ಮಾಪೂರ ಅವರು ಸಂತಸ ವ್ಯಕ್ತಪಡಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಹಿನ್ನೀರಿನಲ್ಲಿ ಮುಳುಗಡೆಯಾಗುವ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಅದರಂತೆ ನಮ್ಮ ಸರ್ಕಾರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಕೊಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಜೊತೆಗೆ ಕಾಲುವೆ ನೀರ್ಮಾಣಕ್ಕೆ ಭೂಮಿ ಕಳೆದುಕೊಳ್ಳುವ ರೈತರ ನೀರಾವರಿ ಜಮೀನಿಗೆ 30 ಲಕ್ಷ, ಒಣ ಭೂಮಿಗೆ 25 ಲಕ್ಷ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ಅವರು ಹೇಳಿದರು.
ಆಲಮಟ್ಟಿ ಜಲಾಶಯವನ್ನು
519ರಿಂದ 524 ಮೀಟರ್‌ ರವರೆಗೂ ಎತ್ತರಿಸುವುದರಿಂದ 75 ಸಾವಿರಕ್ಕೂ ಹೆಚ್ಚು ಎಕರೆ ಜಮೀನು ಹಿನ್ನೀರಿನಲ್ಲಿ ಮುಳುಗಡೆಯಾಗಲಿದೆ. ಒಂದೇ ಹಂತದಲ್ಲಿ ಭೂಸ್ವಾಧೀನ ಖರೀದಿ ಮೂಲಕ ಸ್ವಾಧೀನಕ್ಕೆ ತೀರ್ಮಾನ ಮಾಡಲಾಗಿದೆ.
ಹಿಂದಿನ ಸರ್ಕಾರದಲ್ಲಿ ಒಣಭೂಮಿಗೆ 20 ಲಕ್ಷ, ನೀರಾವರಿಗೆ 24 ಲಕ್ಷ ತೀರ್ಮಾನ ಮಾಡಿತ್ತು. ಆದರೆ ರೈತರು ಒಪ್ಪಿರಲಿಲ್ಲ. ಹಾಗಾಗಿ, ರೈತ ಸಂಘಟನೆಗಳು, ಎಲ್ಲಾ ಪಕ್ಷದ ಶಾಸಕರೊಂದಿಗೆ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಹಲವು ಸಭೆ ನಡೆಸಿ, ಅಭಿಪ್ರಾಯ ಪಡೆದಿದ್ದರು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಇವತ್ತಿನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲಾಗಿದೆ‌. ಇದರಿಂದ ನಮ್ಮ ಭಾಗದ ಜನರಿಗೆ ಸಂತಸ ಆಗಲಿದೆ. ನುಡಿದಂತೆ ನಡೆಯುವುದು ನಮ್ಮ ಸರ್ಕಾರ. ಜನರಿಗೆ ನೀಡಿದ್ದ ಭರವಸೆಯಂತೆ ಈಡೇರಿಸಲಾಗುತ್ತಿದೆ‌. ಹುಟ್ಟುಹಬ್ಬದ ದಿನದಂದೇ ನಮ್ಮ ಭಾಗದ ಜನರ ಹೋರಾಟಕ್ಕೆ ಫಲ ಸಿಕ್ಕಿರುವುದು ಮತ್ತಷ್ಟು ನನಗೆ ಸಂತಸ ತಂದಿದೆ ಎಂದು ಸಚಿವ ತಿಮ್ಮಾಪೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು