6:11 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರು | ಗೋ ಕಳ್ಳತನ ಪ್ರಕರಣ: 3 ಮಂದಿ ಆರೋಪಿಗಳ ಬಂಧನ; ಜರ್ಸಿ ದನ ವಶಕ್ಕೆ

17/09/2025, 20:27

ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ತಜಿಪೋಡಿ ಎಂಬಲ್ಲಿ ಗೋ ಕಳ್ಳತನ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಆರೋಪಿಗಳ ಬಂಧಿಸಿದ್ದಾರೆ.
ಬಂಧಿತರನ್ನು ಅಡ್ಯಾರ್ ಗಾಣದಬೆಟ್ಟು ನಿವಾಸಿ
ಶಾಬಾಜ್ ಅಹಮ್ಮದ್, ಅರ್ಕುಳದ ಮೊಹಮ್ಮದ್ ಸುಹಾನ್ ಹಾಗೂ ಅಡ್ಯಾರ್ ಜುಮ್ಮಾ ಮಸೀದಿ ಬಳಿ ಮನೆಯ ವಳಚ್ಚಿಲ್ ಖಾದರ್ ಮೊಹಮ್ಮದ್ @ ಕೋಳಿ ಮೋನಕ್ಕ ಎಂದು ಗುರುತಿಸಲಾಗಿದೆ.
ಆರೋಪಿಗಳು ಸೆ. 13ರಂದು ಬೆಳಗಿನ ಜಾವ ಮಂಗಳೂರು ನಗರದ ಹೊರವಲಯದ ಅಡ್ಯಾರ್ ತಜಿಪೋಡಿ ಮನೆ ಎಂಬಲ್ಲಿ ಉಮೇಶ್ ಆಳ್ವ ಎಂಬವರ ಮನೆಯ ಅಂಗಳದಿಂದ ಒಂದು ಕ್ರಾಸ್ ಜರ್ಸಿ ಹಸುವನ್ನು ಕಳ್ಳತನ ಮಾಡಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಕಳುವಾದ ಹಸುವನ್ನು ಕಂಕನಾಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಜೀವಂತವಾಗಿ ಪತ್ತೆ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಆರೋಪಿಗಳು ದನ ಕಳ್ಳತನ ಮಾಡಿ ಅದನ್ನು ವಳಚಿಲ್ ಅಬ್ದುಲ್ ಖಾದರ್ ಮನೆಗೆ ಹೊಂದಿಕೊಂಡ ಶೆಡ್ ನಲ್ಲಿ ಹತ್ಯೆ ಮಾಡಿ ಮಾಂಸ ಮಾಡಲು ಸಿದ್ಧತೆ ಮಾಡಿಕೊಂಡ ಹಿನ್ನಲೆಯಲ್ಲಿ ಈ ಜಾಗವನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆದ್ಯಾದೇಶ -2020 ರಲ್ಲಿ ಪ್ರದತ್ತವಾದ ಅಧಿಕಾರದಂತೆ ಜಪ್ತಿ ಮಾಡಿ, ಸರಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು