3:32 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಗಳೂರು | ಗೋ ಕಳ್ಳತನ ಪ್ರಕರಣ: 3 ಮಂದಿ ಆರೋಪಿಗಳ ಬಂಧನ; ಜರ್ಸಿ ದನ ವಶಕ್ಕೆ

17/09/2025, 20:27

ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ತಜಿಪೋಡಿ ಎಂಬಲ್ಲಿ ಗೋ ಕಳ್ಳತನ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಆರೋಪಿಗಳ ಬಂಧಿಸಿದ್ದಾರೆ.
ಬಂಧಿತರನ್ನು ಅಡ್ಯಾರ್ ಗಾಣದಬೆಟ್ಟು ನಿವಾಸಿ
ಶಾಬಾಜ್ ಅಹಮ್ಮದ್, ಅರ್ಕುಳದ ಮೊಹಮ್ಮದ್ ಸುಹಾನ್ ಹಾಗೂ ಅಡ್ಯಾರ್ ಜುಮ್ಮಾ ಮಸೀದಿ ಬಳಿ ಮನೆಯ ವಳಚ್ಚಿಲ್ ಖಾದರ್ ಮೊಹಮ್ಮದ್ @ ಕೋಳಿ ಮೋನಕ್ಕ ಎಂದು ಗುರುತಿಸಲಾಗಿದೆ.
ಆರೋಪಿಗಳು ಸೆ. 13ರಂದು ಬೆಳಗಿನ ಜಾವ ಮಂಗಳೂರು ನಗರದ ಹೊರವಲಯದ ಅಡ್ಯಾರ್ ತಜಿಪೋಡಿ ಮನೆ ಎಂಬಲ್ಲಿ ಉಮೇಶ್ ಆಳ್ವ ಎಂಬವರ ಮನೆಯ ಅಂಗಳದಿಂದ ಒಂದು ಕ್ರಾಸ್ ಜರ್ಸಿ ಹಸುವನ್ನು ಕಳ್ಳತನ ಮಾಡಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಕಳುವಾದ ಹಸುವನ್ನು ಕಂಕನಾಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಜೀವಂತವಾಗಿ ಪತ್ತೆ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಆರೋಪಿಗಳು ದನ ಕಳ್ಳತನ ಮಾಡಿ ಅದನ್ನು ವಳಚಿಲ್ ಅಬ್ದುಲ್ ಖಾದರ್ ಮನೆಗೆ ಹೊಂದಿಕೊಂಡ ಶೆಡ್ ನಲ್ಲಿ ಹತ್ಯೆ ಮಾಡಿ ಮಾಂಸ ಮಾಡಲು ಸಿದ್ಧತೆ ಮಾಡಿಕೊಂಡ ಹಿನ್ನಲೆಯಲ್ಲಿ ಈ ಜಾಗವನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆದ್ಯಾದೇಶ -2020 ರಲ್ಲಿ ಪ್ರದತ್ತವಾದ ಅಧಿಕಾರದಂತೆ ಜಪ್ತಿ ಮಾಡಿ, ಸರಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು