6:25 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

Chikkamagaluru | ಜಯಪುರ ಸಾರ್ವಜನಿಕ ಆಸ್ಪತ್ರೆ ತಕ್ಷಣ ಉದ್ಘಾಟನೆಗೆ ಒತ್ತಾಯಿಸಿ ಪ್ರತಿಭಟನೆ

17/09/2025, 20:47

ಶಶಿ ಬೆತ್ತದಕೊಳಲು ಚಿಕ್ಕಮಗಳೂರು

info.reporterkarnataka@gmail.com

ಜಯಪುರದ ಸಾರ್ವಜನಿಕ ಆಸ್ಪತ್ರೆಯನ್ನು ಹದಿನೈದು ದಿನಗಳೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಗೆ ಅನುಕೂಲ ಮಾಡಬೇಕು ಎಂದು ಜಯಪುರದಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು ಕೂಡಲೇ ಉದ್ಘಾಟಿಸುವಂತೆ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ದಿಶಾ ಸಮಿತಿ ಸದಸ್ಯರಾದ ಮಣಿಕಂಠನ್ ಕಂದಸ್ವಾಮಿ ಆಗ್ರಹಿಸಿದರು.
ಕಳೆದ ಸರ್ಕಾರದ ಅವಧಿಯಲ್ಲಿ ಆರಂಭವಾದ ಜಯಪುರ ಸಾರ್ವಜನಿಕ ಆಸ್ಪತ್ರೆ ಕಾಮಗಾರಿ ಮುಗಿದು ಅನೇಕ ತಿಂಗಳುಗಳಾದರೂ ಇನ್ನೂ ಉದ್ಘಾಟನೆ ಆಗದೆ ಸಾರ್ವಜನಿಕ ಸೇವೆ ಲಭ್ಯವಿಲ್ಲದೆ ಸುಮಾರು 20 ಕಿಮೀ ವ್ಯಾಪ್ತಿಯ ಜನತೆ ತುರ್ತು ಆರೋಗ್ಯ ಸೌಲಭ್ಯ ಸಿಗದೆ ಪರಿತಪ್ಪಿಸುವಂತಾಗಿದೆ. ಕಳೆದ ಬಾರಿ ಪ್ರತಿಭಟನೆ ಮಾಡಿದಾಗ ಉದ್ಘಾಟನೆಗೆ ಒತ್ತಾಯಿಸಿದಾಗ ಉದ್ಘಾಟನೆಗೆ ದಿನಾಂಕ ಗೊತ್ತುಪಡಿಸಿ ನಂತರ ಮುಂದೂಡಿ ಇನ್ನೂ ಉದ್ಘಾಟನೆ ಬಗ್ಗೆ ಯಾವುದೇ ಪ್ರಗತಿ ಇಲ್ಲದೆ ಇರುವುದು ಹಲವು ಸಂಶಯವನ್ನು ಮೂಡಿಸುತ್ತಿದೆ.
ಉದ್ಘಾಟನೆ ದಿನಾಂಕ ನಿಗದಿ ಪಡಿಸುವ ವರೆಗೆ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದರೂ ಕೊನೆಗೆ ವೈಧ್ಯಾಧಿಕಾರಿ ಸುಧೀಂದ್ರ ದೂರವಾಣಿ ಮೂಲಕ ಡಿ ಎಚ್ ಓ ಗೆ ಮಾತನಾಡಿ ಹದಿನೈದು ದಿನದೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಯನ್ನು ಪ್ರಾರಂಭಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಯಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಕರುಣಾಕರ , ಉಪಾಧ್ಯಕ್ಷೆ ಜಯ ಮುರುಗೇಶ್ , ಬಿಜೆಪಿ ಮೇಗುಂದಾ ಹೋಬಳಿ ಅಧ್ಯಕ್ಷ ಕಾರ್ತಿಕ್ , ಪ್ರಧಾನ ಕಾರ್ಯದರ್ಶಿ ಹಾಲಪ್ಪ , ಪಂಚಾಯತಿ ಸದಸ್ಯರಾದ ಸಂಪತ್ , ವೆಂಕಟೇಶ್ , ಪ್ರವೀಣ್ , ರಮ್ಯ , ನಳಿನಿ , ಶ್ರೀನಿವಾಸ , ಶಕುಂತಲಾ ಮುಖಂಡರಾದ ಧರ್ಮರಾಜ್ , ಮಂಜು ಅಣ್ಣು , ಕುಮಾರ್, ಸುಧೀಂದ್ರ, ಯುವಮೋರ್ಚಾ ಅಧ್ಯಕ್ಷ ಸಂದೇಶ್ ಹಾಗೂ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು