7:57 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Chikkamagaluru | ಜಯಪುರ ಸಾರ್ವಜನಿಕ ಆಸ್ಪತ್ರೆ ತಕ್ಷಣ ಉದ್ಘಾಟನೆಗೆ ಒತ್ತಾಯಿಸಿ ಪ್ರತಿಭಟನೆ

17/09/2025, 20:47

ಶಶಿ ಬೆತ್ತದಕೊಳಲು ಚಿಕ್ಕಮಗಳೂರು

info.reporterkarnataka@gmail.com

ಜಯಪುರದ ಸಾರ್ವಜನಿಕ ಆಸ್ಪತ್ರೆಯನ್ನು ಹದಿನೈದು ದಿನಗಳೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಗೆ ಅನುಕೂಲ ಮಾಡಬೇಕು ಎಂದು ಜಯಪುರದಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು ಕೂಡಲೇ ಉದ್ಘಾಟಿಸುವಂತೆ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ದಿಶಾ ಸಮಿತಿ ಸದಸ್ಯರಾದ ಮಣಿಕಂಠನ್ ಕಂದಸ್ವಾಮಿ ಆಗ್ರಹಿಸಿದರು.
ಕಳೆದ ಸರ್ಕಾರದ ಅವಧಿಯಲ್ಲಿ ಆರಂಭವಾದ ಜಯಪುರ ಸಾರ್ವಜನಿಕ ಆಸ್ಪತ್ರೆ ಕಾಮಗಾರಿ ಮುಗಿದು ಅನೇಕ ತಿಂಗಳುಗಳಾದರೂ ಇನ್ನೂ ಉದ್ಘಾಟನೆ ಆಗದೆ ಸಾರ್ವಜನಿಕ ಸೇವೆ ಲಭ್ಯವಿಲ್ಲದೆ ಸುಮಾರು 20 ಕಿಮೀ ವ್ಯಾಪ್ತಿಯ ಜನತೆ ತುರ್ತು ಆರೋಗ್ಯ ಸೌಲಭ್ಯ ಸಿಗದೆ ಪರಿತಪ್ಪಿಸುವಂತಾಗಿದೆ. ಕಳೆದ ಬಾರಿ ಪ್ರತಿಭಟನೆ ಮಾಡಿದಾಗ ಉದ್ಘಾಟನೆಗೆ ಒತ್ತಾಯಿಸಿದಾಗ ಉದ್ಘಾಟನೆಗೆ ದಿನಾಂಕ ಗೊತ್ತುಪಡಿಸಿ ನಂತರ ಮುಂದೂಡಿ ಇನ್ನೂ ಉದ್ಘಾಟನೆ ಬಗ್ಗೆ ಯಾವುದೇ ಪ್ರಗತಿ ಇಲ್ಲದೆ ಇರುವುದು ಹಲವು ಸಂಶಯವನ್ನು ಮೂಡಿಸುತ್ತಿದೆ.
ಉದ್ಘಾಟನೆ ದಿನಾಂಕ ನಿಗದಿ ಪಡಿಸುವ ವರೆಗೆ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದರೂ ಕೊನೆಗೆ ವೈಧ್ಯಾಧಿಕಾರಿ ಸುಧೀಂದ್ರ ದೂರವಾಣಿ ಮೂಲಕ ಡಿ ಎಚ್ ಓ ಗೆ ಮಾತನಾಡಿ ಹದಿನೈದು ದಿನದೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಯನ್ನು ಪ್ರಾರಂಭಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಯಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಕರುಣಾಕರ , ಉಪಾಧ್ಯಕ್ಷೆ ಜಯ ಮುರುಗೇಶ್ , ಬಿಜೆಪಿ ಮೇಗುಂದಾ ಹೋಬಳಿ ಅಧ್ಯಕ್ಷ ಕಾರ್ತಿಕ್ , ಪ್ರಧಾನ ಕಾರ್ಯದರ್ಶಿ ಹಾಲಪ್ಪ , ಪಂಚಾಯತಿ ಸದಸ್ಯರಾದ ಸಂಪತ್ , ವೆಂಕಟೇಶ್ , ಪ್ರವೀಣ್ , ರಮ್ಯ , ನಳಿನಿ , ಶ್ರೀನಿವಾಸ , ಶಕುಂತಲಾ ಮುಖಂಡರಾದ ಧರ್ಮರಾಜ್ , ಮಂಜು ಅಣ್ಣು , ಕುಮಾರ್, ಸುಧೀಂದ್ರ, ಯುವಮೋರ್ಚಾ ಅಧ್ಯಕ್ಷ ಸಂದೇಶ್ ಹಾಗೂ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು