9:24 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

Chikkamagaluru | ಜಯಪುರ ಸಾರ್ವಜನಿಕ ಆಸ್ಪತ್ರೆ ತಕ್ಷಣ ಉದ್ಘಾಟನೆಗೆ ಒತ್ತಾಯಿಸಿ ಪ್ರತಿಭಟನೆ

17/09/2025, 20:47

ಶಶಿ ಬೆತ್ತದಕೊಳಲು ಚಿಕ್ಕಮಗಳೂರು

info.reporterkarnataka@gmail.com

ಜಯಪುರದ ಸಾರ್ವಜನಿಕ ಆಸ್ಪತ್ರೆಯನ್ನು ಹದಿನೈದು ದಿನಗಳೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಗೆ ಅನುಕೂಲ ಮಾಡಬೇಕು ಎಂದು ಜಯಪುರದಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು ಕೂಡಲೇ ಉದ್ಘಾಟಿಸುವಂತೆ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ದಿಶಾ ಸಮಿತಿ ಸದಸ್ಯರಾದ ಮಣಿಕಂಠನ್ ಕಂದಸ್ವಾಮಿ ಆಗ್ರಹಿಸಿದರು.
ಕಳೆದ ಸರ್ಕಾರದ ಅವಧಿಯಲ್ಲಿ ಆರಂಭವಾದ ಜಯಪುರ ಸಾರ್ವಜನಿಕ ಆಸ್ಪತ್ರೆ ಕಾಮಗಾರಿ ಮುಗಿದು ಅನೇಕ ತಿಂಗಳುಗಳಾದರೂ ಇನ್ನೂ ಉದ್ಘಾಟನೆ ಆಗದೆ ಸಾರ್ವಜನಿಕ ಸೇವೆ ಲಭ್ಯವಿಲ್ಲದೆ ಸುಮಾರು 20 ಕಿಮೀ ವ್ಯಾಪ್ತಿಯ ಜನತೆ ತುರ್ತು ಆರೋಗ್ಯ ಸೌಲಭ್ಯ ಸಿಗದೆ ಪರಿತಪ್ಪಿಸುವಂತಾಗಿದೆ. ಕಳೆದ ಬಾರಿ ಪ್ರತಿಭಟನೆ ಮಾಡಿದಾಗ ಉದ್ಘಾಟನೆಗೆ ಒತ್ತಾಯಿಸಿದಾಗ ಉದ್ಘಾಟನೆಗೆ ದಿನಾಂಕ ಗೊತ್ತುಪಡಿಸಿ ನಂತರ ಮುಂದೂಡಿ ಇನ್ನೂ ಉದ್ಘಾಟನೆ ಬಗ್ಗೆ ಯಾವುದೇ ಪ್ರಗತಿ ಇಲ್ಲದೆ ಇರುವುದು ಹಲವು ಸಂಶಯವನ್ನು ಮೂಡಿಸುತ್ತಿದೆ.
ಉದ್ಘಾಟನೆ ದಿನಾಂಕ ನಿಗದಿ ಪಡಿಸುವ ವರೆಗೆ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದರೂ ಕೊನೆಗೆ ವೈಧ್ಯಾಧಿಕಾರಿ ಸುಧೀಂದ್ರ ದೂರವಾಣಿ ಮೂಲಕ ಡಿ ಎಚ್ ಓ ಗೆ ಮಾತನಾಡಿ ಹದಿನೈದು ದಿನದೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಯನ್ನು ಪ್ರಾರಂಭಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಯಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಕರುಣಾಕರ , ಉಪಾಧ್ಯಕ್ಷೆ ಜಯ ಮುರುಗೇಶ್ , ಬಿಜೆಪಿ ಮೇಗುಂದಾ ಹೋಬಳಿ ಅಧ್ಯಕ್ಷ ಕಾರ್ತಿಕ್ , ಪ್ರಧಾನ ಕಾರ್ಯದರ್ಶಿ ಹಾಲಪ್ಪ , ಪಂಚಾಯತಿ ಸದಸ್ಯರಾದ ಸಂಪತ್ , ವೆಂಕಟೇಶ್ , ಪ್ರವೀಣ್ , ರಮ್ಯ , ನಳಿನಿ , ಶ್ರೀನಿವಾಸ , ಶಕುಂತಲಾ ಮುಖಂಡರಾದ ಧರ್ಮರಾಜ್ , ಮಂಜು ಅಣ್ಣು , ಕುಮಾರ್, ಸುಧೀಂದ್ರ, ಯುವಮೋರ್ಚಾ ಅಧ್ಯಕ್ಷ ಸಂದೇಶ್ ಹಾಗೂ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು