10:25 PM Sunday28 - June 2026
ಬ್ರೇಕಿಂಗ್ ನ್ಯೂಸ್
ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ…

ಇತ್ತೀಚಿನ ಸುದ್ದಿ

Chikkamagaluru | ಜಯಪುರ ಸಾರ್ವಜನಿಕ ಆಸ್ಪತ್ರೆ ತಕ್ಷಣ ಉದ್ಘಾಟನೆಗೆ ಒತ್ತಾಯಿಸಿ ಪ್ರತಿಭಟನೆ

17/09/2025, 20:47

ಶಶಿ ಬೆತ್ತದಕೊಳಲು ಚಿಕ್ಕಮಗಳೂರು

info.reporterkarnataka@gmail.com

ಜಯಪುರದ ಸಾರ್ವಜನಿಕ ಆಸ್ಪತ್ರೆಯನ್ನು ಹದಿನೈದು ದಿನಗಳೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಗೆ ಅನುಕೂಲ ಮಾಡಬೇಕು ಎಂದು ಜಯಪುರದಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು ಕೂಡಲೇ ಉದ್ಘಾಟಿಸುವಂತೆ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ದಿಶಾ ಸಮಿತಿ ಸದಸ್ಯರಾದ ಮಣಿಕಂಠನ್ ಕಂದಸ್ವಾಮಿ ಆಗ್ರಹಿಸಿದರು.
ಕಳೆದ ಸರ್ಕಾರದ ಅವಧಿಯಲ್ಲಿ ಆರಂಭವಾದ ಜಯಪುರ ಸಾರ್ವಜನಿಕ ಆಸ್ಪತ್ರೆ ಕಾಮಗಾರಿ ಮುಗಿದು ಅನೇಕ ತಿಂಗಳುಗಳಾದರೂ ಇನ್ನೂ ಉದ್ಘಾಟನೆ ಆಗದೆ ಸಾರ್ವಜನಿಕ ಸೇವೆ ಲಭ್ಯವಿಲ್ಲದೆ ಸುಮಾರು 20 ಕಿಮೀ ವ್ಯಾಪ್ತಿಯ ಜನತೆ ತುರ್ತು ಆರೋಗ್ಯ ಸೌಲಭ್ಯ ಸಿಗದೆ ಪರಿತಪ್ಪಿಸುವಂತಾಗಿದೆ. ಕಳೆದ ಬಾರಿ ಪ್ರತಿಭಟನೆ ಮಾಡಿದಾಗ ಉದ್ಘಾಟನೆಗೆ ಒತ್ತಾಯಿಸಿದಾಗ ಉದ್ಘಾಟನೆಗೆ ದಿನಾಂಕ ಗೊತ್ತುಪಡಿಸಿ ನಂತರ ಮುಂದೂಡಿ ಇನ್ನೂ ಉದ್ಘಾಟನೆ ಬಗ್ಗೆ ಯಾವುದೇ ಪ್ರಗತಿ ಇಲ್ಲದೆ ಇರುವುದು ಹಲವು ಸಂಶಯವನ್ನು ಮೂಡಿಸುತ್ತಿದೆ.
ಉದ್ಘಾಟನೆ ದಿನಾಂಕ ನಿಗದಿ ಪಡಿಸುವ ವರೆಗೆ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದರೂ ಕೊನೆಗೆ ವೈಧ್ಯಾಧಿಕಾರಿ ಸುಧೀಂದ್ರ ದೂರವಾಣಿ ಮೂಲಕ ಡಿ ಎಚ್ ಓ ಗೆ ಮಾತನಾಡಿ ಹದಿನೈದು ದಿನದೊಳಗೆ ಉದ್ಘಾಟನೆ ಮಾಡಿ ಸಾರ್ವಜನಿಕ ಸೇವೆಯನ್ನು ಪ್ರಾರಂಭಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಯಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಕರುಣಾಕರ , ಉಪಾಧ್ಯಕ್ಷೆ ಜಯ ಮುರುಗೇಶ್ , ಬಿಜೆಪಿ ಮೇಗುಂದಾ ಹೋಬಳಿ ಅಧ್ಯಕ್ಷ ಕಾರ್ತಿಕ್ , ಪ್ರಧಾನ ಕಾರ್ಯದರ್ಶಿ ಹಾಲಪ್ಪ , ಪಂಚಾಯತಿ ಸದಸ್ಯರಾದ ಸಂಪತ್ , ವೆಂಕಟೇಶ್ , ಪ್ರವೀಣ್ , ರಮ್ಯ , ನಳಿನಿ , ಶ್ರೀನಿವಾಸ , ಶಕುಂತಲಾ ಮುಖಂಡರಾದ ಧರ್ಮರಾಜ್ , ಮಂಜು ಅಣ್ಣು , ಕುಮಾರ್, ಸುಧೀಂದ್ರ, ಯುವಮೋರ್ಚಾ ಅಧ್ಯಕ್ಷ ಸಂದೇಶ್ ಹಾಗೂ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು