9:00 PM Sunday28 - June 2026
ಬ್ರೇಕಿಂಗ್ ನ್ಯೂಸ್
ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ…

ಇತ್ತೀಚಿನ ಸುದ್ದಿ

ಗಬ್ಬದ ಹಸು ಕದ್ದು ಕೊಂದ ಪ್ರಕರಣ: ಕೊಂಡಂಗೇರಿಯ 3 ಮಂದಿ ಆರೋಪಿಗಳ ಬಂಧನ

17/09/2025, 21:30

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮೈತಾಡಿ ಗ್ರಾಮದ ನಿವಾಸಿ ಬೊಳ್ಳಪಂಡ ಎಂ.ಭೀಮಯ್ಯ ಅವರ ಒಂದು ಹಸು ಕಳ್ಳತನವಾಗಿರುವ ಕುರಿತು ದೂರನ್ನು ವಿರಾಜಪೇಟೆ ಗ್ರಾಮಾಂತರ ಪೊಲೀಸರಿಗೆ ನೀಡಿದ ಅನ್ವಯ ಪೊಲೀಸರು ಶೀಘ್ರಗತಿಯಲ್ಲಿ ತನಿಖೆ ಕೈಗೊಂಡು ಮೂರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದ ಆರೋಪಿಗಳ ಪತ್ತೆಗಾಗಿ ಮಹೇಶ್ ಕುಮಾರ್.ಎಸ್, ಡಿ.ಎಸ್‌.ಪಿ, ವಿರಾಜಪೇಟೆ ಉಪವಿಭಾಗ, ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ, ಠಾಣಾಧಿಕಾರಿ ಲತಾ.ಎನ್.ಜೆ, ವಾಣಿಶ್ರೀ, ಪಿಎಸ್‌ಐ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳಾದ ಸಾಜನ್, ಜೋಸ್ ನಿಶಾಂತ್, ಸಂತೋಷ್ ಚೌಹನ್, ಅಬ್ದುಲ್ ಮಜೀದ್, ಬೋಪಣ್ಣ ರವರುಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಸೆಪ್ಟೆಂಬರ್ 13 ರಂದು 3 ಜನ ಆರೋಪಿಗಳಾದ, ಮೊಹಮ್ಮದ್ ಆಶಿಕ್, 22 ವರ್ಷ, ಕೊಂಡಂಗೇರಿ ಗ್ರಾಮ, ಶಾಹಿದ್, 25 ವರ್ಷ, ಕೊಂಡಂಗೇರಿ ಗ್ರಾಮ,ಹ್ಯಾರೀಸ್, 34 ವರ್ಷ ಕೊಂಡಂಗೇರಿ ಗ್ರಾಮ. ಇವರುಗಳನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳು ಇನ್ನಷ್ಟು ಇದೇ ರೀತಿಯ ಹಸು ಕಳ್ಳತನ ಕೃತ್ಯಗಳನ್ನು ನಡೆಸಿರುವ ಶಂಕೆ ಇದ್ದು ಪೊಲೀಸರ ತನಿಕೆಯಿಂದ ಬಯಲಾಗಬೇಕಾಗಿದೆ. ಈ ಭಾಗದಲ್ಲಿ ಹಲವರು ಈಗಾಗಲೇ ತಮ್ಮ ಹಸುಗಳನ್ನು ಕಳೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು