6:24 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿನ್ನಡಿ ದೇವಸ್ಥಾನದ ಜಾಗ ಒತ್ತುವರಿ ತೆರವುಗೊಳಿಸಲು ತಾಲೂಕು ದಂಡಾಧಿಕಾರಿಗೆ ಗ್ರಾಮಸ್ಥರ ಮನವಿ

18/09/2025, 22:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಮೂಡಿಗೆರೆ ತಾಲ್ಲೂಕು ಬಿನ್ನಡಿ ಗ್ರಾಮದಲ್ಲಿ 12ನೇ ಶತಮಾನದಲ್ಲಿ ಕಟ್ಟಿದ ಐತಿಹಾಸಿಕ ಕನ್ನೆರಮ್ಮ ದೇವಸ್ಥಾನವಿದ್ದು ಆ ದೇವಸ್ಥಾನದ ಜೊತೆಗೆ ಬ್ರಹ್ಮಲಿಂಗೇಶ್ವರ, ಬಾಸಮ್ಮ ಹಾಗೂ ದೇವಿರಮ್ಮ ದೇವಸ್ಥಾನಗಳಿಗೆ ಊರಿನ ಹಿರಿಯರು ಮೀಸಲಿಟ್ಟಿದ್ದ ಸುಮಾರು 11 ಎಕರೆ ಜಾಗದಲ್ಲಿ ಮುಕ್ಕಾಲು ಪಾಲು ಒತ್ತುವರಿ ಆಗಿದ್ದು ದೇವಸ್ಥಾನದ ಆಚಾರ ವಿಚಾರಗಳಿಗೆ ಜಾಗವಿಲ್ಲದಂತ ಸ್ಥಿತಿ ನಿರ್ಮಾಣವಾಗಿರುವುದರಿಂದ ಗ್ರಾಮಸ್ಥರು ಹಿಂದೆ ಜಿಲ್ಲಾಧಿಕಾರಿಗಳನ್ನು ಮನವಿ ಮಾಡಿದ್ದರು. ಈಗ ತಾಲ್ಲೂಕು ದಂಡಾಧಿಕಾರಿಗಳಿಗೆ ಭೇಟಿ ಮಾಡಿ ಸರ್ವೇ ಮಾಡಿ ಒತ್ತುವರಿ ತೆರವು ಮಾಡಿಸಿ ದೇವಸ್ಥಾನದ ಜಾಗವನ್ನು ಅಧಿಕೃತ ಮಾಡಿ ಕೊಡುವಂತೆ ಕೋರಲಾಯಿತು.
ಗ್ರಾಮಸ್ಥರೊಂದಿಗೆ ಬಿಜೆಪಿ ನಾಯಕರಾದ ದೀಪಕ್ ದೊಡ್ಡಯ್ಯ, ಗ್ರಾಮಸ್ಥರಾದ ವಿಜೇಂದ್ರ,ರಮೇಶ್,ಬಿ.ಟಿ. ದೇವರಾಜ್, ರವಿ ಕುಮಾರ್, ವೀರೇಂದ್ರ, ಧರ್ಮರಾಜ್, ಸುನೀಲ್, ವೆಂಕಟೇಶ್, ಉಪೇಂದ್ರ,ಲಕ್ಷ್ಮಣ,ವಿನುತ್,ಮೋಹನ್,ಅಭಿಜಿತ್,ಪೂರ್ಣೇಶ್,ಸಂಪತ್,ಅರುಣ್ ಬಿನ್ನಡಿ. ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು