1:00 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿನ್ನಡಿ ದೇವಸ್ಥಾನದ ಜಾಗ ಒತ್ತುವರಿ ತೆರವುಗೊಳಿಸಲು ತಾಲೂಕು ದಂಡಾಧಿಕಾರಿಗೆ ಗ್ರಾಮಸ್ಥರ ಮನವಿ

18/09/2025, 22:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಮೂಡಿಗೆರೆ ತಾಲ್ಲೂಕು ಬಿನ್ನಡಿ ಗ್ರಾಮದಲ್ಲಿ 12ನೇ ಶತಮಾನದಲ್ಲಿ ಕಟ್ಟಿದ ಐತಿಹಾಸಿಕ ಕನ್ನೆರಮ್ಮ ದೇವಸ್ಥಾನವಿದ್ದು ಆ ದೇವಸ್ಥಾನದ ಜೊತೆಗೆ ಬ್ರಹ್ಮಲಿಂಗೇಶ್ವರ, ಬಾಸಮ್ಮ ಹಾಗೂ ದೇವಿರಮ್ಮ ದೇವಸ್ಥಾನಗಳಿಗೆ ಊರಿನ ಹಿರಿಯರು ಮೀಸಲಿಟ್ಟಿದ್ದ ಸುಮಾರು 11 ಎಕರೆ ಜಾಗದಲ್ಲಿ ಮುಕ್ಕಾಲು ಪಾಲು ಒತ್ತುವರಿ ಆಗಿದ್ದು ದೇವಸ್ಥಾನದ ಆಚಾರ ವಿಚಾರಗಳಿಗೆ ಜಾಗವಿಲ್ಲದಂತ ಸ್ಥಿತಿ ನಿರ್ಮಾಣವಾಗಿರುವುದರಿಂದ ಗ್ರಾಮಸ್ಥರು ಹಿಂದೆ ಜಿಲ್ಲಾಧಿಕಾರಿಗಳನ್ನು ಮನವಿ ಮಾಡಿದ್ದರು. ಈಗ ತಾಲ್ಲೂಕು ದಂಡಾಧಿಕಾರಿಗಳಿಗೆ ಭೇಟಿ ಮಾಡಿ ಸರ್ವೇ ಮಾಡಿ ಒತ್ತುವರಿ ತೆರವು ಮಾಡಿಸಿ ದೇವಸ್ಥಾನದ ಜಾಗವನ್ನು ಅಧಿಕೃತ ಮಾಡಿ ಕೊಡುವಂತೆ ಕೋರಲಾಯಿತು.
ಗ್ರಾಮಸ್ಥರೊಂದಿಗೆ ಬಿಜೆಪಿ ನಾಯಕರಾದ ದೀಪಕ್ ದೊಡ್ಡಯ್ಯ, ಗ್ರಾಮಸ್ಥರಾದ ವಿಜೇಂದ್ರ,ರಮೇಶ್,ಬಿ.ಟಿ. ದೇವರಾಜ್, ರವಿ ಕುಮಾರ್, ವೀರೇಂದ್ರ, ಧರ್ಮರಾಜ್, ಸುನೀಲ್, ವೆಂಕಟೇಶ್, ಉಪೇಂದ್ರ,ಲಕ್ಷ್ಮಣ,ವಿನುತ್,ಮೋಹನ್,ಅಭಿಜಿತ್,ಪೂರ್ಣೇಶ್,ಸಂಪತ್,ಅರುಣ್ ಬಿನ್ನಡಿ. ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು