7:37 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿನ್ನಡಿ ದೇವಸ್ಥಾನದ ಜಾಗ ಒತ್ತುವರಿ ತೆರವುಗೊಳಿಸಲು ತಾಲೂಕು ದಂಡಾಧಿಕಾರಿಗೆ ಗ್ರಾಮಸ್ಥರ ಮನವಿ

18/09/2025, 22:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಮೂಡಿಗೆರೆ ತಾಲ್ಲೂಕು ಬಿನ್ನಡಿ ಗ್ರಾಮದಲ್ಲಿ 12ನೇ ಶತಮಾನದಲ್ಲಿ ಕಟ್ಟಿದ ಐತಿಹಾಸಿಕ ಕನ್ನೆರಮ್ಮ ದೇವಸ್ಥಾನವಿದ್ದು ಆ ದೇವಸ್ಥಾನದ ಜೊತೆಗೆ ಬ್ರಹ್ಮಲಿಂಗೇಶ್ವರ, ಬಾಸಮ್ಮ ಹಾಗೂ ದೇವಿರಮ್ಮ ದೇವಸ್ಥಾನಗಳಿಗೆ ಊರಿನ ಹಿರಿಯರು ಮೀಸಲಿಟ್ಟಿದ್ದ ಸುಮಾರು 11 ಎಕರೆ ಜಾಗದಲ್ಲಿ ಮುಕ್ಕಾಲು ಪಾಲು ಒತ್ತುವರಿ ಆಗಿದ್ದು ದೇವಸ್ಥಾನದ ಆಚಾರ ವಿಚಾರಗಳಿಗೆ ಜಾಗವಿಲ್ಲದಂತ ಸ್ಥಿತಿ ನಿರ್ಮಾಣವಾಗಿರುವುದರಿಂದ ಗ್ರಾಮಸ್ಥರು ಹಿಂದೆ ಜಿಲ್ಲಾಧಿಕಾರಿಗಳನ್ನು ಮನವಿ ಮಾಡಿದ್ದರು. ಈಗ ತಾಲ್ಲೂಕು ದಂಡಾಧಿಕಾರಿಗಳಿಗೆ ಭೇಟಿ ಮಾಡಿ ಸರ್ವೇ ಮಾಡಿ ಒತ್ತುವರಿ ತೆರವು ಮಾಡಿಸಿ ದೇವಸ್ಥಾನದ ಜಾಗವನ್ನು ಅಧಿಕೃತ ಮಾಡಿ ಕೊಡುವಂತೆ ಕೋರಲಾಯಿತು.
ಗ್ರಾಮಸ್ಥರೊಂದಿಗೆ ಬಿಜೆಪಿ ನಾಯಕರಾದ ದೀಪಕ್ ದೊಡ್ಡಯ್ಯ, ಗ್ರಾಮಸ್ಥರಾದ ವಿಜೇಂದ್ರ,ರಮೇಶ್,ಬಿ.ಟಿ. ದೇವರಾಜ್, ರವಿ ಕುಮಾರ್, ವೀರೇಂದ್ರ, ಧರ್ಮರಾಜ್, ಸುನೀಲ್, ವೆಂಕಟೇಶ್, ಉಪೇಂದ್ರ,ಲಕ್ಷ್ಮಣ,ವಿನುತ್,ಮೋಹನ್,ಅಭಿಜಿತ್,ಪೂರ್ಣೇಶ್,ಸಂಪತ್,ಅರುಣ್ ಬಿನ್ನಡಿ. ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು