9:52 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಅನನ್ಯ ಭಟ್ ಪ್ರಕರಣ: ವಾಸಂತಿ ಸಹೋದರ ಕೊಡಗಿನ ವಿಜಯ್ ಎಸ್ಐಟಿ ಮುಂದೆ ಹಾಜರು

19/09/2025, 12:27

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆ ಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ವಾಸಂತಿ ಎಂ. ಪಿ. ಸಹೋದರ ಕೊಡಗಿನ ವಿಜಯ್ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ. ವಿಚಾರಣೆಗೆಂದು ಎಸ್ಐಟಿ ಕಚೇರಿಯಿಂದ ನೀಡಿದ್ದ ಹಿನ್ನಲೆಯಲ್ಲಿ ಹಾಜರಾದ ವಿಜಯ್, ಸುಜಾತ ಭಟ್ ವಾಸಂತಿ ಯನ್ನು ತನ್ನ ಮಗಳು ಅನನ್ಯ ಭಟ್ ಎಂದು ಹೇಳಿದಲ್ಲದೆ, ಧರ್ಮಸ್ಥಳಕ್ಕೆ ತನ್ನ ಸ್ನೇಹಿತರೊಂದಿಗೆ ಬಂದಿದ್ದಳು. ಬಳಿಕ ನಾಪತ್ತೆಯಾಗಿದಳು ಎಂದು ಆರೋಪಿಸಿದ ಕಾರಣ ಸಹೋದರ ವಿಜಯ್ ಬಳಿ ಮಾಹಿತಿ ಪಡೆಯಲಾಗಿತ್ತು, ಅದಲ್ಲದೆ ವಿಜಯ್ ಸಹೋದರಿ ವಾಸಂತಿ ಬೆಂಗಳೂರಿನಲ್ಲಿ ನರ್ಸ್ ಆಗಿದ್ದಳು, ಸುಜಾತ ಭಟ್ ಮಾಧ್ಯಮಗಳಿಗೆ ತೋರಿಸಿರುವ ಫೋಟೋ ತನ್ನ ಸಹೋದರಿಯದ್ದು ಎಂದು ಮಾಹಿತಿ ನೀಡಿದು, ಸುಜಾತ ಭಟ್ ನೀಡಿರುವ ದೂರು ಸುಳ್ಳು ಎಂದು ತಿಳಿಸಲಾಗಿದ್ದು, ತನ್ನ ಸಹೋದರಿ ವಿರಾಜಪೇಟೆ ಬಳಿ ಆರ್ಜಿ ಮೃತಾಪಟ್ಟಿದ್ದಾಳೆ, ಈ ಬಗ್ಗೆ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ 18 ವರ್ಷದ ಹಿಂದೆಯೇ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು