3:36 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಅನನ್ಯ ಭಟ್ ಪ್ರಕರಣ: ವಾಸಂತಿ ಸಹೋದರ ಕೊಡಗಿನ ವಿಜಯ್ ಎಸ್ಐಟಿ ಮುಂದೆ ಹಾಜರು

19/09/2025, 12:27

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆ ಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ವಾಸಂತಿ ಎಂ. ಪಿ. ಸಹೋದರ ಕೊಡಗಿನ ವಿಜಯ್ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ. ವಿಚಾರಣೆಗೆಂದು ಎಸ್ಐಟಿ ಕಚೇರಿಯಿಂದ ನೀಡಿದ್ದ ಹಿನ್ನಲೆಯಲ್ಲಿ ಹಾಜರಾದ ವಿಜಯ್, ಸುಜಾತ ಭಟ್ ವಾಸಂತಿ ಯನ್ನು ತನ್ನ ಮಗಳು ಅನನ್ಯ ಭಟ್ ಎಂದು ಹೇಳಿದಲ್ಲದೆ, ಧರ್ಮಸ್ಥಳಕ್ಕೆ ತನ್ನ ಸ್ನೇಹಿತರೊಂದಿಗೆ ಬಂದಿದ್ದಳು. ಬಳಿಕ ನಾಪತ್ತೆಯಾಗಿದಳು ಎಂದು ಆರೋಪಿಸಿದ ಕಾರಣ ಸಹೋದರ ವಿಜಯ್ ಬಳಿ ಮಾಹಿತಿ ಪಡೆಯಲಾಗಿತ್ತು, ಅದಲ್ಲದೆ ವಿಜಯ್ ಸಹೋದರಿ ವಾಸಂತಿ ಬೆಂಗಳೂರಿನಲ್ಲಿ ನರ್ಸ್ ಆಗಿದ್ದಳು, ಸುಜಾತ ಭಟ್ ಮಾಧ್ಯಮಗಳಿಗೆ ತೋರಿಸಿರುವ ಫೋಟೋ ತನ್ನ ಸಹೋದರಿಯದ್ದು ಎಂದು ಮಾಹಿತಿ ನೀಡಿದು, ಸುಜಾತ ಭಟ್ ನೀಡಿರುವ ದೂರು ಸುಳ್ಳು ಎಂದು ತಿಳಿಸಲಾಗಿದ್ದು, ತನ್ನ ಸಹೋದರಿ ವಿರಾಜಪೇಟೆ ಬಳಿ ಆರ್ಜಿ ಮೃತಾಪಟ್ಟಿದ್ದಾಳೆ, ಈ ಬಗ್ಗೆ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ 18 ವರ್ಷದ ಹಿಂದೆಯೇ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು