3:43 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಕೇರಳ ಕೊಲೆ- ದರೋಡೆ ಪ್ರಕರಣ: ಕೊಡಗು – ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಆರೋಪಿಗಳು ಎಸ್ಕೇಪ್

19/09/2025, 13:03

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕೇರಳದಲ್ಲಿ ನಡೆದ ಕೊಲೆ ಹಾಗೂ ದರೋಡೆ ಪ್ರಕರಣದ ಆರೋಪಿಗಳು ಕೊಡಗು- ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆದ ಘಟನೆ ನಡೆದಿದೆ.
ಕೇರಳದ ಪಾಲಕಾಡುನಲ್ಲಿ ಕಳವು ಮತ್ತು ಕೊಲೆ ಪ್ರಕರಣ ದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಲು ಪೊಲೀಸರು ಸಿದ್ದವಾಗಿದ್ದ ಬೆನ್ನಲ್ಲೇ ಪೊಲೀಸರಿಗೆ ಸಿಗದೆ ಪರಾರಿ ಆದ ಘಟನೆ ನಡೆದಿದೆ. ದರೋಡೆ ಆರೋಪಿಗಳು ಕೊಡಗಿನಲ್ಲಿ ಸಂಚಾರಿಸುತ್ತಿರುವ ಬಗ್ಗೆ ಟ್ರ್ಯಾಪ್ ಮಾಡಿದ್ದ ಪೊಲೀಸರು ದಕ್ಷಿಣ ಕನ್ನಡದ ಸುಳ್ಯ ಮಾರ್ಗವಾಗಿ ತೆರಳುವ ವಾಹನವನ್ನು ಹಿಡಿಯಲು ಸಂಪಾಜೆ ಬಳಿಯ ಕಲ್ಲುಗುoಡಿ ಸೇತುವೆ ಬಳಿ ಪೊಲೀಸರು ಸಜ್ಜಗಿದ್ದರು, ಕಲ್ಲುಗುoಡಿ ಔಟ್ ಪೋಸ್ಟ್ ಬಳಿ ಆರೋಪಿಗಳು ಇದ್ದ ಕಪ್ಪು ಬಣ್ಣದ ಮಹಿಂದ್ರಾ ತಾರ್ ದಾಟು ತ್ತಿದ್ದಂತೆ ಅಲರ್ಟ್ ಆಗಿದ್ದ ಮಾಹಿತಿ ಅದೇಗೋ ಅರಿತ ದರೋಡೆಕೋರರು, ದೇವರಕೊಲ್ಲಿ ಬಳಿ ವಾಹನ ನಿಲ್ಲಿಸಿ ಪರಾರಿ ಆಗಿದ್ದಾರೆ.ಈ ಕೃತ್ಯದಲ್ಲಿ ಗಂಡ ಹೆಂಡತಿ ಭಾಗಿಯಾಗಿದ್ದು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೇರಳದ ಪೊಲೀಸರು ನಡೆಸಲಾಗುತ್ತಿದ್ದು, ಸ್ಥಳೀಯ ಪೊಲೀಸರ ನೆರವು ಕೊರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು