4:18 PM Tuesday4 - November 2025
ಬ್ರೇಕಿಂಗ್ ನ್ಯೂಸ್
40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:…

ಇತ್ತೀಚಿನ ಸುದ್ದಿ

ಬ್ಯೂಟಿಪಾರ್ಲರ್ – ಸ್ಪಾ ಮಸಾಜ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ ಆರೋಪ: ಇಬ್ಬರ ವಿರುದ್ದ ಪ್ರಕರಣ ದಾಖಲು; 6 ಮಂದಿ ಮಹಿಳೆಯರ ರಕ್ಷಣೆ

20/09/2025, 10:37

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಖಾಸಗಿ ಕಟ್ಟಡವನ್ನು ಭಾಡಿಗೆಗೆ ಪಡೆದು ಬ್ಯೂಟಿಪಾರ್ಲರ್ ನೊಂದಿಗೆ ಪರವಾನೆಗೆ ಇಲ್ಲದೇ ಸ್ಪಾ ಸೆಂಟರ್ ನಡೆಸುತಿದ್ದ ಕೇರಳ ಮೂಲದ ಇಬ್ಬರು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವಿರಾಜಪೇಟೆ ನಗರದಲ್ಲಿ ನಡೆದಿದೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪನ್ ಮತ್ತು ಶಿಜು ಎಂಬಿಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳಾಗಿದ್ದು ಇವರ ವಿರುದ್ಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಗಾಂಧಿನಗರದಲ್ಲಿ ಖಾಸಗಿ ಕಟ್ಟಡವೊಂದನ್ನು ಬಾಡಿಗೆಗೆ ಪಡೆದಿದ್ದ ಪ್ರದೀಪನ್ ಮತ್ತು ಶಿಜು ಎಂಬುವವರು ಆರೇಂಜ್ ಫ್ಯಾಮಿಲಿ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಸೆಂಟರ್ ನಡೆಸುತ್ತಿದ್ದರು. ಇಲ್ಲಿ ಸುಮಾರು 6 ತಿಂಗಳಿನಿಂದ ಹೊರ ರಾಜ್ಯಗಳ ಐಷಾರಾಮಿ ವಾಹನಗಳು ಬಂದು ನಿಲುಗಡೆಗೊಂಡು ಮರಳುತ್ತಿದ್ದವು. ಈ ಸೆಂಟರ್ ನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರಲ್ಲಿ ಸಂಶಯ ಮೂಡಿಸಿತ್ತು ಅಲ್ಲದೇ ಕೆಲವರು ಮೌಖಿಕವಾಗಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ದಿನಾಂಕ 18-09-2025 ರಂದು ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಪರವಾನಗೆ ಪಡೆದು ಅಕ್ರಮವಾಗಿ ಸ್ವಾ ಮಸಾಜ್ ಸೆಂಟರ್ ನಡೆಸುತ್ತಿರುವುದು ತಿಳಿದುಬಂದಿದೆ. ಅಲ್ಲದೆ ಕೆಲವು ಯುವತಿಯರನ್ನು ಮತ್ತು ಮಹಿಳೆಯರನ್ನು ಗಿರಾಕಿಗಳಿಗೆ ಪೂರೈಸುತ್ತಿದ್ದುದು ಮೇಲ್ನೋಟಕ್ಕೆ ಕಂಡುಬಂದಿದೆ.
ದಾಳಿಯ ವೇಳೆ ಕೊಡಗು ಜಿಲ್ಲೆಯ ಮತ್ತು ಮಂಗಳೂರು ಹಾಗೂ ತಮಿಳುನಾಡು ಮೂಲದ ಆರು ಮಹಿಳೆಯರನ್ನು ಪೊಲಿಸರು ರಕ್ಷಣೆ ಮಾಡಿ, ಆರೋಪಿಗಳಾದ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪನ್ ಮತ್ತು ಶಿಜು ಎಂಬಿಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು