4:33 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಚಿನ್ನದ ಕರಿಮಣಿ ಸರ ಎಳೆದು ಕಳ್ಳತನ ಮಾಡಿದ ಪ್ರಕರಣ: ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ

20/09/2025, 15:32

ಮಂಗಳೂರು(reporterkarnataka.com): ಚಿನ್ನದ ಕರಿಮಣಿ ಸರ ಎಳೆದು ಕಳ್ಳತನ ಮಾಡಿದ ಪ್ರಕರಣ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ 3 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ 100/2024 ಕಲಂ 126(2),309(5),309(6)BNS ಪ್ರಕರಣದಲ್ಲಿ ಮಹಿಳೆಯೋಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಸುಬ್ಬಾಪುರ್ ಮಠ್ ದೋಷರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು, ಇದರ ವಿಚಾರಣೆ ನಡೆಸಿ ನ್ಯಾಯಾಲಯದ ನ್ಯಾಯಾಧೀಶರಾದ ಸಂದೇಶ್ ಅವರು ಆರೋಪಿಯ ಮೇಲೆ ಆರೋಪ ಸಾಬೀತಾಗಿದೆ ಎಂದು ಮೂರು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5000 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ 6 ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ನೀಡಿರುತ್ತಾರೆ. ಸರ್ಕಾರದ ಪರ ಸಹಾಯಕ ಸಹಕಾರಿ ಅಭಿಯೋಜಕರಾಗಿ ಆಶಿತಾ ಅವರು ವಾದಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು