5:55 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ: 3 ಮಂದಿ ಗೋ ಕಳ್ಳರ ಬಂಧನ; ಓಮಿನಿ ಕಾರು ವಶ

20/09/2025, 16:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕಳೆದ ಹಲವಾರು ದಿನಗಳಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗೋ ಕಳ್ಳತನವಾಗುತ್ತಿರುವ ಬಗ್ಗೆ ಅದರಲ್ಲೂ ಕಾರಿನಲ್ಲಿ ಗೋವುಗಳನ್ನು ತುಂಬಿಕೊಂಡು ಹೋಗುವ ದೃಶ್ಯಗಳು ವರದಿಯಾಗುತ್ತಿದ್ದವು. ಆ ನಂತರ ಬಿಜೆಪಿ ವತಿಯಿಂದ ಈ ವಿಚಾರವಾಗಿ ಪ್ರತಿಭಟನೆ ಸಹ ನಡೆದಿತ್ತು.
ಈ ವಿಚಾರದಲ್ಲಿ ತನಿಖೆ ಚುರುಕುಗೊಳಿಸಿದ ತೀರ್ಥಹಳ್ಳಿ ಪೊಲೀಸರು ಪಟ್ಟಣದ ಬೆಟ್ಟಮಕ್ಕಿಯ ಭೂತರಾಯನಕಟ್ಟೆ ಬಳಿ ಗೋ ಕಳ್ಳತನ ಮಾಡಲು ಬಂದಿದ್ದ ಮೂವರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಓರ್ವ ಹಾಗೂ ಲಿಂಗಾಪುರದ ಇಬ್ಬರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿ ನಿತ್ಯ ಗೋ ಕಳ್ಳತನ ಮಾಡಿ ಗೋ ಸಾಗಾಟ ಮಾಡಲಾಗುತ್ತಿತ್ತು. ಇದರಿಂದ ಜಾಗೃತಗೊಂಡ ಪೊಲೀಸ್ ತಂಡ ಇಂದು ಮೂವರನ್ನು ಬಂಧಿಸಿದೆ. ಬೆಟ್ಟಮಕ್ಕಿ ಬಳಿ ಓಮಿನಿ ಕಾರಿನ ಮೂಲಕ ಗೋ ಕಳ್ಳತನ ಮಾಡಲು ಬಂದಾಗಲೇ ಪೋಲೀಸರ ಕೈಗೆ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಾದ ಮೌಸಿನ್ ಖಾನ್, ಮಹಮದ್ ಮುಸ್ತಾಕ್, ಶಿರಾಜ್ ಉದ್ದಿನ್ ಎಂಬ ಮೂವರನ್ನು ಬಂಧಿಸಲಾಗಿದೆ. ಈ ಮೂವರು ರಸ್ತೆ ಬದಿಯಲ್ಲಿ ಮಲಗಿರುವ ಜಾನುವಾರುಗಳನ್ನು ಒಮಿನಿ ಕಾರಿನಲ್ಲಿ ಹಾಕಿಕೊಂಡು ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಮೂರು ಆರೋಪಿಗಳನ್ನು ಮತ್ತು ಅವರು ಕಳ್ಳತನ ಮಾಡಲು ತಂದಿದ್ದ ಓಮಿನಿ ಕಾರನ್ನು ವಶಕ್ಕೆ ಪಡೆದು ಕಾನೂನು ಕ್ರಮವನ್ನು ಜರುಗಿಸಲಾಗಿದೆ.
ಡಿ ವೈ ಎಸ್ ಪಿ ಅರವಿಂದ್ ಕಲಗುಜ್ಜಿ ಹಾಗೂ ಇನ್ಸ್ಪೆಕ್ಟರ್ ಇಮ್ರಾನ್ ಬೇಗ್ ರವರ ನೇತೃತ್ವದ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಗೋ ಕಳ್ಳರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು