11:53 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ರಾಣಿಬೆನ್ನೂರು: ಮಂಗಳೂರಿನ ಐರಿನ್ ಲೀನಾ ಸಿಕ್ವೇರಾಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

20/09/2025, 17:41

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕೆಥೋಲಿಕ್ ವಿದ್ಯಾ ಮಂಡಳಿಯ ಆಡಳಿತಕ್ಕೊಳಪಟ್ಟ ನಂತೂರು ಕೆಲ್ವರಿ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಐರಿನ್ ಲೀನಾ ಸಿಕ್ವೇರಾ ಅವರು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಿಕ್ಷಕ ಸಂಘ ನೀಡಲ್ಪಡುವ 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿ ಪಡೆದಿದ್ದು, ರಾಣಿಬೆನ್ನೂರುನಲ್ಲಿ ನಡೆದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಹಾವೇರಿ ಜಿಲ್ಲೆಯ ರಾಣಿಬೆನ್ನೂರುನಲ್ಲಿ ನಡೆದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿˌ ಸ್ಥಳೀಯ ಶಾಸಕರುˌ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಶಿಕ್ಷಕರ ಸಮ್ಮುಖದಲ್ಲಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಶಿಕ್ಷಕಿ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿ ಗೌರವಿಸಿದರು. ಐರಿನ್ ಲೀನಾ ಸಿಕ್ವೇರಾ ಅವರು ಹಲವಾರು ವರ್ಷಗಳಿಂದ ಈ ಶಾಲೆಯ ಸರ್ವಾಂಗೀಣ ಬೆಳವಣಿಗೆಗಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದಾರೆ. ಅವರು ಕದ್ರಿ ಕೈಬಟ್ಟಲು ಎಳಳ ನಿವಾಸಿಯಾಗಿದ್ದು ಫರ್ನ್ಸ್ ಸರ್ವಿಸ್ ಸಂಸ್ಥೆಯ ಮಾಲಕ ಟೈಟಸ್ ಫೆರ್ನಾಂಡಿಸ್ ಅವರ ಪತ್ನಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು