6:09 PM Monday27 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ರಾಣಿಬೆನ್ನೂರು: ಮಂಗಳೂರಿನ ಐರಿನ್ ಲೀನಾ ಸಿಕ್ವೇರಾಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

20/09/2025, 17:41

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕೆಥೋಲಿಕ್ ವಿದ್ಯಾ ಮಂಡಳಿಯ ಆಡಳಿತಕ್ಕೊಳಪಟ್ಟ ನಂತೂರು ಕೆಲ್ವರಿ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಐರಿನ್ ಲೀನಾ ಸಿಕ್ವೇರಾ ಅವರು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಿಕ್ಷಕ ಸಂಘ ನೀಡಲ್ಪಡುವ 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿ ಪಡೆದಿದ್ದು, ರಾಣಿಬೆನ್ನೂರುನಲ್ಲಿ ನಡೆದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಹಾವೇರಿ ಜಿಲ್ಲೆಯ ರಾಣಿಬೆನ್ನೂರುನಲ್ಲಿ ನಡೆದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿˌ ಸ್ಥಳೀಯ ಶಾಸಕರುˌ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಶಿಕ್ಷಕರ ಸಮ್ಮುಖದಲ್ಲಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಶಿಕ್ಷಕಿ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿ ಗೌರವಿಸಿದರು. ಐರಿನ್ ಲೀನಾ ಸಿಕ್ವೇರಾ ಅವರು ಹಲವಾರು ವರ್ಷಗಳಿಂದ ಈ ಶಾಲೆಯ ಸರ್ವಾಂಗೀಣ ಬೆಳವಣಿಗೆಗಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದಾರೆ. ಅವರು ಕದ್ರಿ ಕೈಬಟ್ಟಲು ಎಳಳ ನಿವಾಸಿಯಾಗಿದ್ದು ಫರ್ನ್ಸ್ ಸರ್ವಿಸ್ ಸಂಸ್ಥೆಯ ಮಾಲಕ ಟೈಟಸ್ ಫೆರ್ನಾಂಡಿಸ್ ಅವರ ಪತ್ನಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು