6:05 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್: ಕಾಲ್ವರಿ ವಾರ್ಡಿನ ವಾರ್ಷಿಕ ದಿನಾಚರಣೆ

22/09/2025, 10:35

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಕಾಲ್ವರಿ ವಾರ್ಡಿನ ವಾರ್ಷಿಕ ದಿನಾಚರಣೆ ಭಾನುವಾರ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಅಸಿಸಿ ಪ್ರೆಸ್ ನ ನಿರ್ದೇಶಕ ಹಾಗೂ ಸೇವಕ್ ಕೊಂಕಣಿ ಪತ್ರಿಕೆಯ ಸಂಪಾದಕ ವಂದನೀಯ ಫಾ. ಚೇತನ್ ಲೋಬೊ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ ವಾರ್ಡ್ ದಿನಾಚರಣೆಯಿಂದ ಕುಟುಂಬದ ಏಕತೆ, ವಾರ್ಡಿನ ಸದಸ್ಯರಲ್ಲಿ ಅನ್ಯೋನ್ಯತೆ ಹಾಗೂ ಪರಸ್ಪರ ಹೊಂದಾಣಿಕೆ ಹೆಚ್ಚುತ್ತದೆ ಎಂದರು.
ಅತಿಥಿಯಾಗಿದ್ದ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಾತನಾಡಿ ವಾರ್ಡ್ ದಿನಾಚರಣೆಯಿಂದ ವಾರ್ಡಿನ ಸದಸ್ಯರ ಪ್ರತಿಭೆಯನ್ನು ಗುರುತಿಸ ಬಹುದು ಹಾಗೂ ವಾರ್ಡಿನ ಒಗ್ಗಟ್ಟು ಹೆಚ್ಚಿಸಿ ಕೊಳ್ಳ ಬಹುದು ಎಂದರು.
ವಾರ್ಡಿನ ಮುಖ್ಯಸ್ಥರಾದ ಜೆಸಿಂತಾ ಫೆರ್ನಾಂಡಿಸ್ ಸ್ವಾಗತಿಸಿದರು. ವಾರ್ಡಿನ ಎಲ್ಲಾ ಸದಸ್ಯರಿಂದಲೂ ವಿವಿಧ ವಿನೋದಾವಳಿ ನಡೆಯಿತು.
ವಾರ್ಡಿನ ಹಿರಿಯ ನಾಗರಿಕರನ್ನು, ಸಾಧಕರನ್ನು ಮತ್ತು ಪ್ರತಿಭಾನ್ವಿತರನ್ನು ಸನ್ಮಾನಿಸಲಾಯಿತು. ವಂದನೀಯ ಫಾ. ಚೇತನ್ ಲೋಬೊ ಅವರನ್ನು ಕೂಡಾ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರತಿನಿಧಿಗಳಾದ ವಿನ್ಸೆಂಟ್ ಬಾರೆಟ್ಟೊ ಮತ್ತು ವೆಲೆಂಟಿನಾ ರೊಡ್ರಿಗಸ್ ಉಪಸ್ಥಿತರಿದ್ದರು. ಮಾರಿಯೋ ರೇಗೊ ವಂದಿಸಿದರು. ಲೊಲಿಟಾ ಪ್ರೆಂಟೇರಿಯೋ ಕಾರ್ಯಕ್ರಮ ನಿರೂಪಿಸಿದರು. ಲ್ಯಾನ್ಸಿ ಪಿಂಟೊ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು